<p><strong>ಬೆಂಗಳೂರು:</strong> ನಾರಾಯಣ ನೇತ್ರಾಲಯದ ಇಂದಿರಾನಗರದ ಶಾಖೆಯು ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದೀಪಾವಳಿ ಕಲಾ ಸ್ಪರ್ಧೆಯು ಮಕ್ಕಳಲ್ಲಿ ಪಟಾಕಿ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಿತು.</p>.<p>ದೀಪಕ್ಕೆ ಬಣ್ಣ ಹಾಕುವುದು, ಕಾಗದದ ತೋರಣ ತಯಾರಿ ಸೇರಿ ವಿವಿಧ ಚಟುವಟಿಕೆಗಳನ್ನು ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ವಿಭಾಗದಲ್ಲಿ ನಡೆಸಲಾಯಿತು. ಈ ಸ್ಪರ್ಧೆಯಲ್ಲಿ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>ಸ್ಪರ್ಧೆಯ ತೀರ್ಪುಗಾರರೂ ಆಗಿದ್ದ ನಾರಾಯಣ ನೇತ್ರಾಲಯದ ನಿರ್ದೇಶಕಿ ನೈನಾ ಶೆಟ್ಟಿ ಮಕ್ಕಳ ಜತೆಗೆ ಸಂವಾದ ನಡೆಸಿದರು. ಕಣ್ಣಿನಂತಹ ಸೂಕ್ಷ್ಮ ಅಂಗಗಳಿಗೆ ಪಟಾಕಿಯಿಂದಾಗುವ ಅಪಾಯಗಳ ಬಗ್ಗೆ ವಿವರಿಸಿದ ಅವರು, ಸುರಕ್ಷಿತ ದೀಪಾವಳಿ ಆಚರಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ತಿಳಿಸಿದರು. </p>.<p>ಈ ಕಾರ್ಯಕ್ರಮದ ಭಾಗವಾಗಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೆ ಸುರಕ್ಷತಾ ಕನ್ನಡಕಗಳನ್ನು ವಿತರಿಸಲಾಯಿತು. ಇದೇ ವೇಳೆ ಹುಲಿ ಕುಣಿತವನ್ನು ಕಲಾವಿದರು ಪ್ರಸ್ತುತಪಡಿಸಿದರು. ನಾರಾಯಣ ನೇತ್ರಾಲಯದ ವೈದ್ಯರಾದ ಡಾ.ಸಂಕೇತ್ ಭಟ್ನಾಗರ್ ಮತ್ತು ಡಾ.ಬಿಂದು ರುದ್ರಮೂರ್ತಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಾರಾಯಣ ನೇತ್ರಾಲಯದ ಇಂದಿರಾನಗರದ ಶಾಖೆಯು ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದೀಪಾವಳಿ ಕಲಾ ಸ್ಪರ್ಧೆಯು ಮಕ್ಕಳಲ್ಲಿ ಪಟಾಕಿ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಿತು.</p>.<p>ದೀಪಕ್ಕೆ ಬಣ್ಣ ಹಾಕುವುದು, ಕಾಗದದ ತೋರಣ ತಯಾರಿ ಸೇರಿ ವಿವಿಧ ಚಟುವಟಿಕೆಗಳನ್ನು ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ವಿಭಾಗದಲ್ಲಿ ನಡೆಸಲಾಯಿತು. ಈ ಸ್ಪರ್ಧೆಯಲ್ಲಿ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>ಸ್ಪರ್ಧೆಯ ತೀರ್ಪುಗಾರರೂ ಆಗಿದ್ದ ನಾರಾಯಣ ನೇತ್ರಾಲಯದ ನಿರ್ದೇಶಕಿ ನೈನಾ ಶೆಟ್ಟಿ ಮಕ್ಕಳ ಜತೆಗೆ ಸಂವಾದ ನಡೆಸಿದರು. ಕಣ್ಣಿನಂತಹ ಸೂಕ್ಷ್ಮ ಅಂಗಗಳಿಗೆ ಪಟಾಕಿಯಿಂದಾಗುವ ಅಪಾಯಗಳ ಬಗ್ಗೆ ವಿವರಿಸಿದ ಅವರು, ಸುರಕ್ಷಿತ ದೀಪಾವಳಿ ಆಚರಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ತಿಳಿಸಿದರು. </p>.<p>ಈ ಕಾರ್ಯಕ್ರಮದ ಭಾಗವಾಗಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೆ ಸುರಕ್ಷತಾ ಕನ್ನಡಕಗಳನ್ನು ವಿತರಿಸಲಾಯಿತು. ಇದೇ ವೇಳೆ ಹುಲಿ ಕುಣಿತವನ್ನು ಕಲಾವಿದರು ಪ್ರಸ್ತುತಪಡಿಸಿದರು. ನಾರಾಯಣ ನೇತ್ರಾಲಯದ ವೈದ್ಯರಾದ ಡಾ.ಸಂಕೇತ್ ಭಟ್ನಾಗರ್ ಮತ್ತು ಡಾ.ಬಿಂದು ರುದ್ರಮೂರ್ತಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>