ಮಂಗಳವಾರ, 21 ಅಕ್ಟೋಬರ್ 2025
×
ADVERTISEMENT
ADVERTISEMENT

ಬೆಂಗಳೂರು: ಹಸಿರು ಪಟಾಕಿ ಬಳಕೆ ಕಡ್ಡಾಯವಾದರೂ ತಗ್ಗದ ಕಣ್ಣಿನ ಗಾಯ ಪ್ರಕರಣ

Published : 20 ಅಕ್ಟೋಬರ್ 2025, 23:30 IST
Last Updated : 20 ಅಕ್ಟೋಬರ್ 2025, 23:30 IST
ಫಾಲೋ ಮಾಡಿ
Comments
ಹಸಿರು ಪಟಾಕಿಗಳಲ್ಲಿಯೂ ನಿಗದಿತ ಪ್ರಮಾಣದಲ್ಲಿ ರಾಸಾಯನಿಕಗಳು ಇರುತ್ತವೆ. ಕಣ್ಣು ಸೂಕ್ಷ್ಮ ಅಂಗವಾಗಿರುವುದರಿಂದ ಸಣ್ಣ ಕಿಡಿಯೂ ದೊಡ್ಡ ಹಾನಿ ಮಾಡುತ್ತದೆ. ಸುರಕ್ಷತೆಗೆ ಆದ್ಯತೆ ನೀಡಬೇಕು
ಡಾ. ಶಶಿಧರ್ ಮಿಂಟೊ ಕಣ್ಣಿನ ಆಸ್ಪತ್ರೆ ನಿರ್ದೇಶಕ
‘ಕಣ್ಣುಗಳಿಗೆ ಸುರಕ್ಷಿತವಲ್ಲ’
‘ಹಸಿರು ಪಟಾಕಿಗಳು ಪರಿಸರಕ್ಕೆ ಪೂರಕವಾದರೂ ಕಣ್ಣುಗಳಿಗೆ ಸುರಕ್ಷಿತವಲ್ಲ. ಹಸಿರು ಪಟಾಕಿಗಳಿಂದ ಅಪಾಯವಿಲ್ಲವೆಂಬ ಭಾವನೆಯಿಂದ ಕೆಲವರು ಮುನ್ನೆಚ್ಚರಿಕೆ ವಹಿಸದೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಹಸಿರು ಪಟಾಕಿಗಳಲ್ಲಿ ರಾಸಾಯನಿಕಗಳ ಬಳಕೆ ಪ್ರಮಾಣ ಶೇ 50ರಷ್ಟು ಕಡಿಮೆ ಇರುತ್ತದೆ. ಹೆಚ್ಚು ಹಾನಿ ಮಾಡುವ ಬೇರಿಯಂ ಮತ್ತು ಲಿಥಿಯಂ ಹೊರತುಪಡಿಸಿ ಇತರೆ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಇದರಿಂದ ಮಾಲಿನ್ಯ ಪ್ರಮಾಣ ಕಡಿಮೆಯಾದರೂ ಸ್ಫೋಟ ಮತ್ತು ಶಬ್ದದ ತೀವ್ರತೆ ಸಾಮಾನ್ಯ ಪಟಾಕಿಗಳಂತೆ ಇರುತ್ತದೆ’ ಎಂದು ಡಾ. ಅಗರ್ವಾಲ್ಸ್ ಆಸ್ಪತ್ರೆಯ ನೇತ್ರತಜ್ಞೆ ಡಾ. ನೇಹಾ ವಸ್ತಾ ತಿಳಿಸಿದರು.  ‘ಪಟಾಕಿಗಳು ಸ್ಫೋಟಗೊಳ್ಳಲು ಬಳಸುವ ರಾಸಾಯನಿಕಗಳು ಅಪಾಯಕಾರಿಯಾಗಿದ್ದು ಅನಿರೀಕ್ಷಿತ ಸಿಡಿತಗಳು ಹಾಗೂ ಬೆಂಕಿಯ ಕಿಡಿಗಳು ಕಣ್ಣಿಗೆ ಹಾನಿ ಮಾಡಲಿವೆ. ಆದ್ದರಿಂದ ಪಟಾಕಿ ಸಿಡಿಸಲೇ ಬೇಕು ಎಂದಾದಲ್ಲಿ ಕನ್ನಡಕ ಧರಿಸುವಿಕೆ ಸೇರಿ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT