ಅರ್ಜಿಯೊಂದಿಗೆ ನಷ್ಟಕ್ಕೀಡಾಗಿರುವ ಆಸ್ತಿಗೆ ಸಂಬಂಧಿಸಿದ ದಾಖಲೆ, ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಪ್ರತಿ, ವಿಡಿಯೊ ತುಣುಕು ಸೇರಿದಂತೆ ಹಲವು ದಾಖಲೆಗಳನ್ನು ಸಲ್ಲಿಸಬೇಕು. ಆ ಬಳಿಕ ನಷ್ಟಕ್ಕೀಡಾದ ಆಸ್ತಿಗಳ ಮೌಲ್ಯಮಾಪನ ನಡೆಸಿ ಹೈಕೋರ್ಟ್ ಗೆ ವರದಿ ಸಲ್ಲಿಸಲಾಗುವುದು. ಅದನ್ನು ಆಧರಿಸಿ ಗಲಭೆಗೆ ಕಾರಣವಾದ ವ್ಯಕ್ತಿ ಅಥವಾ ಸಂಘಟನೆಗಳಿಂದ ನಷ್ಟ ವಸೂಲಿಗೆ ನ್ಯಾಯಾಲಯ ಆದೇಶ ಹೊರಡಿಸಲಿದೆ ಎಂದು ಕೆಂಪಣ್ಣ ತಿಳಿಸಿದರು.