‘ಈ ರೀತಿ ಪೋಸ್ಟ್ ಹಾಕುವುದನ್ನು ನವೀನ್ ಅಭ್ಯಾಸ ಮಾಡಿಕೊಂಡಿದ್ದಾನೆ. ಆತನ ವಿರುದ್ಧ ವಿವಿಧ ಠಾಣೆಗಳಲ್ಲಿ ಇದೇ ರೀತಿಯ ಏಳು ಪ್ರಕರಣಗಳು ದಾಖಲಾಗಿವೆ. ಅಲ್ಲದೇ ವ್ಯಕ್ತಿಯೊಬ್ಬ ನವೀನ್ ತಲೆಗೆ ಬಹುಮಾನ ಘೋಷಣೆ ಮಾಡಿರುವ ಕಾರಣ ಜಾಮೀನು ನೀಡಿದರೆ ಆತನ ಜೀವಕ್ಕೆ ಅಪಾಯ ಇದೆ’ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಪ್ರಸನ್ನಕುಮಾರ್ ವಾದಿಸಿದರು.