<p><strong>ಬೆಂಗಳೂರು:</strong> ‘ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆಯ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ಒಪ್ಪಿಸಬೇಕು ಮತ್ತು ರಾಜ್ಯದಲ್ಲಿ ಎಸ್ಡಿಪಿಐ ಅನ್ನು ನಿಷೇಧಿಸಬೇಕು’ ಎಂದು ಶಾಸಕ ಅರವಿಂದ ಲಿಂಬಾವಳಿ ನೇತೃತ್ವದ ಸತ್ಯಶೋಧನಾ ಸಮಿತಿ ವರದಿ ನೀಡಿದೆ.</p>.<p>ಬುಧವಾರ ಈ ವರದಿಯನ್ನು ಬಿಡುಗಡೆ ಮಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ‘ಕಾಂಗ್ರೆಸ್ ಮತ್ತು ಎಸ್ಡಿಪಿಐ ವ್ಯವಸ್ಥಿತ ಪಿತೂರಿಯಿಂದಲೇ ಈ ಗಲಭೆ ನಡೆದಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯ’ ಎಂದು ಹೇಳಿದರು.</p>.<p>‘ಕಾಂಗ್ರೆಸ್ಗೆ ಅಧಿಕಾರದ ಹುಚ್ಚು ಈ ಗಲಭೆಯ ಹಿಂದಿರುವುದು ಸ್ಪಷ್ಟವಾಗಿದೆ. ಗಲಭೆ 2 ರಿಂದ 3 ಗಂಟೆ ಕಾಲ ನಡೆದಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಗಲಭೆಗೆ ಮೊದಲೇ ಒಡೆಯಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಲು ಮತ್ತು ಗಲಭೆಗೆ ಬೇಕಿರುವ ಮಾರಕಾಸ್ತ್ರಗಳನ್ನು ಮುಂಚಿತವಾಗಿಯೇ ತಂದಿಟ್ಟುಕೊಳ್ಳಲಾಗಿತ್ತು, ಪೂರ್ವ ನಿಯೋಜಿತ ಎಂಬುದಕ್ಕೆ ಇದು ಸಾಕ್ಷಿ’ ಎಂದು ಕಟೀಲ್ ಹೇಳಿದರು.</p>.<p>‘ಬಿಬಿಎಂಪಿ ಸದಸ್ಯರಾದ ಅಬ್ದುಲ್ ಹಫೀಜ್ ಜಾಫಿ, ಸಂಪತ್ ರಾಜ್, ಇರ್ಷಾದ್ ಬೇಗಂ ಅವರ ಪತಿ ಈ ಕೃತ್ಯದಲ್ಲಿ ಕೈಜೋಡಿಸಿರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷವು ಆಂತರಿಕ ನಾಯಕತ್ವದ ಸಮಸ್ಯೆ ಪರಿಹರಿಸದೇ ಇರುವುದೇ ಗಲಭೆಗೆ ಕಾರಣ’ ಎಂದೂ ಅವರು ಆರೋಪಿಸಿದರು.</p>.<p>‘ಈ ವರದಿಯನ್ನು ನಾಳೆ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುವುದು’ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.</p>.<p>ಸತ್ಯಶೋಧನಾ ಸಮಿತಿಯಲ್ಲಿ ಸಂಸದರಾದ ಪಿ.ಸಿ.ಮೋಹನ್, ನಾರಾಯಣಸ್ವಾಮಿ ಅವರು ಸಮಿತಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆಯ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ಒಪ್ಪಿಸಬೇಕು ಮತ್ತು ರಾಜ್ಯದಲ್ಲಿ ಎಸ್ಡಿಪಿಐ ಅನ್ನು ನಿಷೇಧಿಸಬೇಕು’ ಎಂದು ಶಾಸಕ ಅರವಿಂದ ಲಿಂಬಾವಳಿ ನೇತೃತ್ವದ ಸತ್ಯಶೋಧನಾ ಸಮಿತಿ ವರದಿ ನೀಡಿದೆ.</p>.<p>ಬುಧವಾರ ಈ ವರದಿಯನ್ನು ಬಿಡುಗಡೆ ಮಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ‘ಕಾಂಗ್ರೆಸ್ ಮತ್ತು ಎಸ್ಡಿಪಿಐ ವ್ಯವಸ್ಥಿತ ಪಿತೂರಿಯಿಂದಲೇ ಈ ಗಲಭೆ ನಡೆದಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯ’ ಎಂದು ಹೇಳಿದರು.</p>.<p>‘ಕಾಂಗ್ರೆಸ್ಗೆ ಅಧಿಕಾರದ ಹುಚ್ಚು ಈ ಗಲಭೆಯ ಹಿಂದಿರುವುದು ಸ್ಪಷ್ಟವಾಗಿದೆ. ಗಲಭೆ 2 ರಿಂದ 3 ಗಂಟೆ ಕಾಲ ನಡೆದಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಗಲಭೆಗೆ ಮೊದಲೇ ಒಡೆಯಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಲು ಮತ್ತು ಗಲಭೆಗೆ ಬೇಕಿರುವ ಮಾರಕಾಸ್ತ್ರಗಳನ್ನು ಮುಂಚಿತವಾಗಿಯೇ ತಂದಿಟ್ಟುಕೊಳ್ಳಲಾಗಿತ್ತು, ಪೂರ್ವ ನಿಯೋಜಿತ ಎಂಬುದಕ್ಕೆ ಇದು ಸಾಕ್ಷಿ’ ಎಂದು ಕಟೀಲ್ ಹೇಳಿದರು.</p>.<p>‘ಬಿಬಿಎಂಪಿ ಸದಸ್ಯರಾದ ಅಬ್ದುಲ್ ಹಫೀಜ್ ಜಾಫಿ, ಸಂಪತ್ ರಾಜ್, ಇರ್ಷಾದ್ ಬೇಗಂ ಅವರ ಪತಿ ಈ ಕೃತ್ಯದಲ್ಲಿ ಕೈಜೋಡಿಸಿರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷವು ಆಂತರಿಕ ನಾಯಕತ್ವದ ಸಮಸ್ಯೆ ಪರಿಹರಿಸದೇ ಇರುವುದೇ ಗಲಭೆಗೆ ಕಾರಣ’ ಎಂದೂ ಅವರು ಆರೋಪಿಸಿದರು.</p>.<p>‘ಈ ವರದಿಯನ್ನು ನಾಳೆ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುವುದು’ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.</p>.<p>ಸತ್ಯಶೋಧನಾ ಸಮಿತಿಯಲ್ಲಿ ಸಂಸದರಾದ ಪಿ.ಸಿ.ಮೋಹನ್, ನಾರಾಯಣಸ್ವಾಮಿ ಅವರು ಸಮಿತಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>