<p><strong>ಬೆಂಗಳೂರು:</strong> ‘ಡಿ.ಜೆ ಹಳ್ಳಿ ಗಲಭೆ ಸಂಬಂಧ ಬಂಧಿತರಾಗಿರುವ ಎಲ್ಲರ ಮಾಹಿತಿಯನ್ನು ಸಿಆರ್ಪಿಸಿ ಸೆಕ್ಷನ್ 41–ಸಿ ಅನ್ವಯ ಬಹಿರಂಗಪಡಿಸಬೇಕು’ ಎಂದು ಕೋರಿ ಸಲ್ಲಿಕೆಯಾಗಿರುವಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.</p>.<p>ಜುನೈದ್ ಅಹಮದ್ ಸಲ್ಲಿಸಿದ್ದ ಅರ್ಜಿಯನ್ನುಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ಪೀಠ ವಿಚಾರಣೆ ನಡೆಸಿತು. ‘ಸಿಆರ್ಪಿಸಿ 41–ಸಿ ಪ್ರಕಾರ, ಬಂಧಿತರು ಮತ್ತು ಬಂಧನ ಕಾರ್ಯಾಚರಣೆ ನಡೆಸಿದ ಪೊಲೀಸರ ವಿವರವನ್ನು ಎಲ್ಲ ಪೊಲೀಸ್ ನಿಯಂತ್ರಣಾ ಕೊಠಡಿಗಳಲ್ಲಿ ಪ್ರದರ್ಶಿಸಬೇಕು’ ಎಂದು ಅರ್ಜಿದಾರರು ಹೇಳಿದ್ದಾರೆ.</p>.<p>‘ಯಾರನ್ನು ಬಂಧಿಸಲಾಗಿದೆ, ಅದಕ್ಕೆ ಕಾರಣ ಏನು ಎಂಬ ಮಾಹಿತಿಯನ್ನು ಎಲ್ಲ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಪ್ರದರ್ಶಿಸಬೇಕು.ಮಾಹಿತಿ ಕಲೆ ಹಾಕಲುನಗರ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದ್ದಾಗ ಎಲ್ಲಿಯೂ ಈ ವಿವರ ಕಾಣಿಸಿಲಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಈ ಸೆಕ್ಷನ್ಗೆ ಅನುಗುಣವಾಗಿ ಎಲ್ಲಾ ವಿಧಿ–ವಿಧಾನಗಳನ್ನು ಅನುಸರಿಸಲಾಗಿದೆಯೇ ಎಂಬುದರ ಬಗ್ಗೆ ಸೆ.11ರಂದು ವಿವರ ಸಲ್ಲಿಸಬೇಕು’ ಎಂದು ಸರ್ಕಾರಕ್ಕೆ ಪೀಠ ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಡಿ.ಜೆ ಹಳ್ಳಿ ಗಲಭೆ ಸಂಬಂಧ ಬಂಧಿತರಾಗಿರುವ ಎಲ್ಲರ ಮಾಹಿತಿಯನ್ನು ಸಿಆರ್ಪಿಸಿ ಸೆಕ್ಷನ್ 41–ಸಿ ಅನ್ವಯ ಬಹಿರಂಗಪಡಿಸಬೇಕು’ ಎಂದು ಕೋರಿ ಸಲ್ಲಿಕೆಯಾಗಿರುವಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.</p>.<p>ಜುನೈದ್ ಅಹಮದ್ ಸಲ್ಲಿಸಿದ್ದ ಅರ್ಜಿಯನ್ನುಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ಪೀಠ ವಿಚಾರಣೆ ನಡೆಸಿತು. ‘ಸಿಆರ್ಪಿಸಿ 41–ಸಿ ಪ್ರಕಾರ, ಬಂಧಿತರು ಮತ್ತು ಬಂಧನ ಕಾರ್ಯಾಚರಣೆ ನಡೆಸಿದ ಪೊಲೀಸರ ವಿವರವನ್ನು ಎಲ್ಲ ಪೊಲೀಸ್ ನಿಯಂತ್ರಣಾ ಕೊಠಡಿಗಳಲ್ಲಿ ಪ್ರದರ್ಶಿಸಬೇಕು’ ಎಂದು ಅರ್ಜಿದಾರರು ಹೇಳಿದ್ದಾರೆ.</p>.<p>‘ಯಾರನ್ನು ಬಂಧಿಸಲಾಗಿದೆ, ಅದಕ್ಕೆ ಕಾರಣ ಏನು ಎಂಬ ಮಾಹಿತಿಯನ್ನು ಎಲ್ಲ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಪ್ರದರ್ಶಿಸಬೇಕು.ಮಾಹಿತಿ ಕಲೆ ಹಾಕಲುನಗರ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದ್ದಾಗ ಎಲ್ಲಿಯೂ ಈ ವಿವರ ಕಾಣಿಸಿಲಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಈ ಸೆಕ್ಷನ್ಗೆ ಅನುಗುಣವಾಗಿ ಎಲ್ಲಾ ವಿಧಿ–ವಿಧಾನಗಳನ್ನು ಅನುಸರಿಸಲಾಗಿದೆಯೇ ಎಂಬುದರ ಬಗ್ಗೆ ಸೆ.11ರಂದು ವಿವರ ಸಲ್ಲಿಸಬೇಕು’ ಎಂದು ಸರ್ಕಾರಕ್ಕೆ ಪೀಠ ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>