ವಿಚಾರಣೆ ವೇಳೆ ಸಹಾಯಕ ಸಾಲಿಸಿಟರ್ ಜನರಲ್ ಎಚ್. ಶಾಂತಿಭೂಷಣ್, ಗಲಭೆಗೆ ಸಂಬಂಧಿಸಿದ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ವರದಿ ಪರಿಶೀಲಿಸಿದ ಪೀಠ, ಸರ್ಕಾರಕ್ಕೆ ಕೆಲ ನಿರ್ದೇಶನ ನೀಡಿ ಎಲ್ಲ ಅರ್ಜಿಗಳನ್ನು ಇತ್ಯರ್ಥಪಡಿಸುವುದಾಗಿ ತಿಳಿಸಿತು. ಅಂತೆಯೇ, ‘ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಯ ಅಗತ್ಯ ಕಂಡು ಬರುತ್ತಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ತೀರ್ಪು ಕಾಯ್ದಿರಿಸಿರುವುದಾಗಿ ಹೇಳಿತು.