ಗಲಭೆ ಹಿಂದೆ ರಾಜಕೀಯ ಉದ್ದೇಶವಿರುವ ಆಧಾರದಲ್ಲಿ ತನಿಖೆ ಕೈಗೊಂಡಿದ್ದ ಪೊಲೀಸರು, ಕಾರ್ಪೋರೇಟರ್ಗಳಾದ ಆರ್.ಸಂಪತ್ ರಾಜ್ ಹಾಗೂ ಜಾಕೀರ್ ಅವರನ್ನು ಸಿಸಿಬಿ ಕಚೇರಿಗೆ ಕರೆಸಿ ವಿಚಾರಣೆ ಮಾಡಿದ್ದರು. ಸಂಪತ್ ರಾಜ್ ಅವರ ಆಪ್ತ ಸಹಾಯಕ ಅರುಣ್ಕುಮಾರ್ ಅವರನ್ನೂ ಬಂಧಿಸಿದ್ದರು. ಇದಾದ ನಂತರ, ಮೂವರ ಹೇಳಿಕೆಗಳನ್ನೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.