‘ನಮ್ಮ ಅಭ್ಯರ್ಥಿ ವಿದ್ಯಾವಂತೆ, ಬುದ್ದಿವಂತೆ, ಅರ್ಹ ಮಹಿಳೆ ಎಂದು ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಉತ್ಸಾಹದಿಂದ ಮುಂದೆ ಬಂದು ಬೆಂಬಲ ನೀಡುತ್ತಿದ್ದಾರೆ. ಮುನಿರತ್ನಗೆ ಅವರ ಪಕ್ಷದಲ್ಲೇ ಅನೇಕ ಸಮಸ್ಯೆಗಳಿವೆ. ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಂತೆ ಬಿಜೆಪಿ ನಾಯಕರು ಹಾಗೂ ಈ ಅಭ್ಯರ್ಥಿಯಿಂದ ಕೇಸು ಹಾಕಿಕೊಂಡಿರುವ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅವರೆಲ್ಲರೂ ಅವರದೇ ಆದ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದೂ ಭವಿಷ್ಯ ನುಡಿದರು.