<p><strong>ಬೆಂಗಳೂರು</strong>: ‘ಇಕ್ಬಾಲ್ ಹುಸೇನ್ ಮಾತನ್ನು ಯಾರೂ ಗಣನೆಗೆ ತೆಗೆದುಕೊಳ್ಳಬೇಡಿ. ಅವನಿಗೆ ಮಾತಿನ ಚಟ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. </p>.<p>ರಾಮನಗರದಲ್ಲಿ ಶನಿವಾರ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್, ‘ಶಿವಕುಮಾರ್ ಅವರಿಗೆ 6 ಮತ್ತು 9 ಅವರ ಅದೃಷ್ಟ ಸಂಖ್ಯೆ. ಹಾಗಾಗಿ ಬಹುತೇಕ ಜ.6ರಂದೇ ಅವರಿಗೆ ಹುದ್ದೆ ಸಿಗಲಿದೆ’ ಎಂದು ಹೇಳಿದ್ದರು.</p>.<p>ಈ ಬಗ್ಗೆ ದೇವನಹಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಅವನ ತಲೆ ಕೆಟ್ಟಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುದ್ದಿಗಾರರು ಕೇಳಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. </p>.<p>‘ಮುಖ್ಯಮಂತ್ರಿಯಾಗಬೇಕೆಂಬ ಶಿವಕುಮಾರ್ ಬೇಡಿಕೆಗೆ ಹೈಕಮಾಂಡ್ ಒಪ್ಪಿಲ್ಲ. ಹೀಗಾಗಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ’ ಎಂದು ಸಿದ್ದರಾಮಯ್ಯ ಮಗ ಯತೀಂದ್ರ ಅವರ ಹೇಳಿಕೆ ನೀಡಿದ ಬಳಿಕ ರಾಜ್ಯ ರಾಜಕಾರಣದಲ್ಲಿ ಮತ್ತೆ ಅಧಿಕಾರ ಹಂಚಿಕೆ ವಿಷಯ ಮುನ್ನೆಲೆಗೆ ಬಂದಿತ್ತು.</p>.<p>ಬೆಳಗಾವಿ ಅಧಿವೇಶನದ ವೇಳೆ, ಅಲ್ಲಿ ನಡೆಯುತ್ತಿರುವ ಔತಣಕೂಟವು ನಾಯಕತ್ವ ಬದಲಾವಣೆಯ ವಿಷಯವನ್ನು ಮತ್ತಷ್ಟು ರಂಗೇರಿಸಿತ್ತು. ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಆಪ್ತ ಶಾಸಕರು, ತಮ್ಮ ನಾಯಕರ ಪ್ರತಿನಿತ್ಯ ಹೇಳಿಕೆ ನೀಡುತ್ತಿದ್ದು, ದೊಡ್ಡ ಮಟ್ಟದ ಚರ್ಚೆಗೂ ಕಾರಣವಾಗಿದೆ.</p>.<p>7 ಅಥವಾ 8ರಂದು ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಈಚೆಗೆ ಹೇಳಿದ್ದ ಅವರ ಅತ್ಯಾಪ್ತ ಶಾಸಕ ಇಕ್ಬಾಲ್, ಶನಿವಾರ ಮತ್ತೊಂದು ದಿನಾಂಕವನ್ನು ಹೇಳಿದ್ದಾರೆ. </p>.<div><blockquote>ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವುದೆಲ್ಲ ಸೆಕೆಂಡರಿ. ಅವರ ನಡವಳಿಕೆಯೂ ಮುಖ್ಯವಾಗುತ್ತದೆ. ಸಚಿವ ಪರಮೇಶ್ವರ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹಾರೈಸುವೆ</blockquote><span class="attribution">ವಿ.ಸೋಮಣ್ಣ, ರೈಲ್ವೆ ಖಾತೆ ರಾಜ್ಯ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಇಕ್ಬಾಲ್ ಹುಸೇನ್ ಮಾತನ್ನು ಯಾರೂ ಗಣನೆಗೆ ತೆಗೆದುಕೊಳ್ಳಬೇಡಿ. ಅವನಿಗೆ ಮಾತಿನ ಚಟ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. </p>.<p>ರಾಮನಗರದಲ್ಲಿ ಶನಿವಾರ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್, ‘ಶಿವಕುಮಾರ್ ಅವರಿಗೆ 6 ಮತ್ತು 9 ಅವರ ಅದೃಷ್ಟ ಸಂಖ್ಯೆ. ಹಾಗಾಗಿ ಬಹುತೇಕ ಜ.6ರಂದೇ ಅವರಿಗೆ ಹುದ್ದೆ ಸಿಗಲಿದೆ’ ಎಂದು ಹೇಳಿದ್ದರು.</p>.<p>ಈ ಬಗ್ಗೆ ದೇವನಹಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಅವನ ತಲೆ ಕೆಟ್ಟಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುದ್ದಿಗಾರರು ಕೇಳಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. </p>.<p>‘ಮುಖ್ಯಮಂತ್ರಿಯಾಗಬೇಕೆಂಬ ಶಿವಕುಮಾರ್ ಬೇಡಿಕೆಗೆ ಹೈಕಮಾಂಡ್ ಒಪ್ಪಿಲ್ಲ. ಹೀಗಾಗಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ’ ಎಂದು ಸಿದ್ದರಾಮಯ್ಯ ಮಗ ಯತೀಂದ್ರ ಅವರ ಹೇಳಿಕೆ ನೀಡಿದ ಬಳಿಕ ರಾಜ್ಯ ರಾಜಕಾರಣದಲ್ಲಿ ಮತ್ತೆ ಅಧಿಕಾರ ಹಂಚಿಕೆ ವಿಷಯ ಮುನ್ನೆಲೆಗೆ ಬಂದಿತ್ತು.</p>.<p>ಬೆಳಗಾವಿ ಅಧಿವೇಶನದ ವೇಳೆ, ಅಲ್ಲಿ ನಡೆಯುತ್ತಿರುವ ಔತಣಕೂಟವು ನಾಯಕತ್ವ ಬದಲಾವಣೆಯ ವಿಷಯವನ್ನು ಮತ್ತಷ್ಟು ರಂಗೇರಿಸಿತ್ತು. ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಆಪ್ತ ಶಾಸಕರು, ತಮ್ಮ ನಾಯಕರ ಪ್ರತಿನಿತ್ಯ ಹೇಳಿಕೆ ನೀಡುತ್ತಿದ್ದು, ದೊಡ್ಡ ಮಟ್ಟದ ಚರ್ಚೆಗೂ ಕಾರಣವಾಗಿದೆ.</p>.<p>7 ಅಥವಾ 8ರಂದು ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಈಚೆಗೆ ಹೇಳಿದ್ದ ಅವರ ಅತ್ಯಾಪ್ತ ಶಾಸಕ ಇಕ್ಬಾಲ್, ಶನಿವಾರ ಮತ್ತೊಂದು ದಿನಾಂಕವನ್ನು ಹೇಳಿದ್ದಾರೆ. </p>.<div><blockquote>ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವುದೆಲ್ಲ ಸೆಕೆಂಡರಿ. ಅವರ ನಡವಳಿಕೆಯೂ ಮುಖ್ಯವಾಗುತ್ತದೆ. ಸಚಿವ ಪರಮೇಶ್ವರ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹಾರೈಸುವೆ</blockquote><span class="attribution">ವಿ.ಸೋಮಣ್ಣ, ರೈಲ್ವೆ ಖಾತೆ ರಾಜ್ಯ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>