ಬೆಂಗಳೂರು: ‘ಕೊರೊನಾದಿಂದ ಜನರನ್ನು ರಕ್ಷಿಸಲು ಧಾವಿಸಬೇಕಾದ ಸಚಿವರು ದುಡ್ಡು ಬಾಚಿಕೊಳ್ಳುವತ್ತ ಗಮನ ಹರಿಸಿದ್ದಾರೆ. ಈ ಹಗರಣಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರೇ ಉತ್ತರ ಕೊಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು,‘ಕರ್ನಾಟಕದಲ್ಲಿ ಪ್ರತಿಹಂತದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವೆಂಟಿಲೇಟರ್, ಪಿಪಿಇ ಕಿಟ್ ಹೀಗೆ ಎಲ್ಲ ವಸ್ತುಗಳ ಖರೀದಿಗಳಲ್ಲೂ ಅಕ್ರಮ ನಡೆದಿವೆ. ಭ್ರಷ್ಟಾಚಾರ ಪ್ರಮಾಣ ಶೇ 200ರಿಂದ ಶೇ 500ರವರೆಗೆ ಇದೆ’ ಎಂದು ಹರಿಹಾಯ್ದರು.
‘ಈ ಹಗರಣಗಳ ಬಗ್ಗೆ ಬೆಳಕು ಚೆಲ್ಲಿರುವ ಮಾಧ್ಯಮಗಳು ರಾಜಕೀಯ ಅಜೆಂಡಾ ಇಟ್ಟುಕೊಂಡಿಲ್ಲ. ಹೀಗಾಗಿ ಉತ್ತರ ಕೊಡಬೇಕು’ ಎಂದರು.