ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು,‘ಅಖಂಡ ಶ್ರೀನಿವಾಸ ಮೂರ್ತಿ ಅವರು 82 ಸಾವಿರ ಮತಗಳಿಂದ ಗೆದ್ದಿದ್ದಾರೆ. ಅಭ್ಯರ್ಥಿ ಬದಲಾವಣೆ ಮಾಡುವ ಯಾವ ಉದ್ದೇಶವೂ ನಮ್ಮ ಮುಂದೆ ಇಲ್ಲ. ನಾನು ಶ್ರೀನಿವಾಸ ಮೂರ್ತಿ ಅವರ ಜತೆ ಮಾತನಾಡಿದ್ದು, ಪ್ರಸನ್ನ ಕುಮಾರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಯಾವುದೇ ಅಭ್ಯಂತರ ಇಲ್ಲ ಎಂದು ಅವರು ಹೇಳಿದ್ದಾರೆ. ಪ್ರಸನ್ನಕುಮಾರ್ ಅವರನ್ನು ಸೇರಿಸಿಕೊಳ್ಳುವ ಬಗ್ಗೆ ಪರಿಶೀಲನಾ ಸಮಿತಿಯು ಎಲ್ಲ ಹಂತಗಳಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದೆ. ಈ ಬೆಳವಣಿಗೆ ಬಿಟ್ಟರೆ, ನಮ್ಮ ಪಕ್ಷದಲ್ಲಿ ಗೊಂದಲ ಇದೆ ಎಂಬುದೆಲ್ಲ ಊಹಾಪೋಹ’ ಎಂದರು.