ಡಿ.ಕೆ.ಶಿವಕುಮಾರ್ ಅವರ ಸಂಬಂಧಿ ಶಶಿಕುಮಾರ್ ಶಿವಣ್ಣ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ‘ದೆಹಲಿ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಕಾಯ್ದೆ ಪ್ರಕಾರ ಸಿಬಿಐ ತನಿಖೆ ನಡೆಯುತ್ತಿರುವಾಗ ರಾಜ್ಯ ಸರ್ಕಾರ ‘ಸಮ್ಮತಿ’ ಬದಲಿಗೆ ‘ಅನುಮೋದನೆ’ ಎಂಬ ಪದವನ್ನು ಬಳಸಿದೆ. ಅನುಮೋದನೆ ಆಡಳಿತಾತ್ಮಕ ವಿಷಯವಾಗಿದ್ದರೂ ಸರ್ಕಾರ ಇದಕ್ಕೆ ಸಕಾರಣ ತಿಳಿಸಬೇಕಿತ್ತು’ ಎಂದು ಅವರ ಪರ ವಕೀಲರು ವಾದಿಸಿದ್ದರು. ವಿಚಾರಣೆ ನಡೆಸಿದನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ,‘ಸಿಬಿಐ ತನಿಖೆಗೆ ಸರ್ಕಾರ ನೀಡಿರುವ ಅನುಮತಿ ಪ್ರಶ್ನಿಸಲು ಅರ್ಜಿದಾರರಿಗೆ ಯಾವುದೇ ಅಧಿಕಾರ ಇಲ್ಲ’ ಎಂದು ಹೇಳಿ ಅರ್ಜಿ ವಜಾಗೊಳಿಸಿದರು.