<p><strong>ರಾಜರಾಜೇಶ್ವರಿ ನಗರ:</strong> ‘ಅಶಕ್ತರು, ನೊಂದವರು ಅನಾಥರ ಸೇವೆ ಮಾಡುವ ಮೂಲಕ ಮಾನವೀಯ ಮೌಲ್ಯಗಳನ್ನು ರೂಡಿಸಿಕೊಳ್ಳಬೇಕು’ ಎಂದು ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ ಹನುಮಂತ ರಾಯಪ್ಪ ತಿಳಿಸಿದರು.</p>.<p>ಮಾಗಡಿ ಮುಖ್ಯ ರಸ್ತೆಯ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಅಭಿಮಾನಿ ಬಳಗ ವತಿಯಿಂದ ನಿರಾಶ್ರಿತರಿಗೆ ಹಣ್ಣು, ಬೆಡ್ಶೀಟ್, ಕಂಬಳಿ ವಿತರಿಸಿ ಅವರು ಮಾತನಾಡಿದರು.</p>.<p>ಅಧಿಕಾರ, ಅಂತಸ್ತು ಯಾವುದು ಶಾಶ್ವತವಲ್ಲ ಬಡವರ ಅನಾಥರ, ಅಶಕ್ತರ ಸಂಕಷ್ಟಗಳಿಗೆ ಮಿಡಿಯುವ ಮೂಲಕ ಮಾನವ ಧರ್ಮ ಪಾಲಿಸಬೇಕೆಂದು ತಿಳಿಸಿದರು.</p>.<p>ಕೊಟ್ಟಿಗೆಪಾಳ್ಯ ಬಿಬಿಎಂಪಿ ಮಾಜಿ ಸದಸ್ಯ ಮೋಹನ್ ಕುಮಾರ್ ಮಾತನಾಡಿ, ‘ನಿರಾಶ್ರಿತರ ಸೇವೆಯೇ ದೇವರ ಸೇವೆ’ ಎಂದು ಬಣ್ಣಿಸಿದರು. ಸಂದರ್ಭದ ಕಾಲ ಸುಳಿಗೆ ಸಿಲುಕಿ ಬಂಧು ಬಾಂಧವರ ಒಡನಾಟವಿಲ್ಲದೆ ಜೀವನ ಸಾಗಿಸುತ್ತಿರುವ ಅವರ ನೆರವಿಗೆ ಧಾವಿಸ ಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಬೇಕಿದೆ’ ಎಂದರು.</p>.<p>ರಾಜರಾಜೇಶ್ವರಿ ನಗರಸಭಾ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಂಪುರ ನಾಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ. ಅಮರ್ನಾಥ್, ರಮೇಶ್ ಗೌಡ, ಜ್ಯೋತಿ, ರಾಜೇಶ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ:</strong> ‘ಅಶಕ್ತರು, ನೊಂದವರು ಅನಾಥರ ಸೇವೆ ಮಾಡುವ ಮೂಲಕ ಮಾನವೀಯ ಮೌಲ್ಯಗಳನ್ನು ರೂಡಿಸಿಕೊಳ್ಳಬೇಕು’ ಎಂದು ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ ಹನುಮಂತ ರಾಯಪ್ಪ ತಿಳಿಸಿದರು.</p>.<p>ಮಾಗಡಿ ಮುಖ್ಯ ರಸ್ತೆಯ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಅಭಿಮಾನಿ ಬಳಗ ವತಿಯಿಂದ ನಿರಾಶ್ರಿತರಿಗೆ ಹಣ್ಣು, ಬೆಡ್ಶೀಟ್, ಕಂಬಳಿ ವಿತರಿಸಿ ಅವರು ಮಾತನಾಡಿದರು.</p>.<p>ಅಧಿಕಾರ, ಅಂತಸ್ತು ಯಾವುದು ಶಾಶ್ವತವಲ್ಲ ಬಡವರ ಅನಾಥರ, ಅಶಕ್ತರ ಸಂಕಷ್ಟಗಳಿಗೆ ಮಿಡಿಯುವ ಮೂಲಕ ಮಾನವ ಧರ್ಮ ಪಾಲಿಸಬೇಕೆಂದು ತಿಳಿಸಿದರು.</p>.<p>ಕೊಟ್ಟಿಗೆಪಾಳ್ಯ ಬಿಬಿಎಂಪಿ ಮಾಜಿ ಸದಸ್ಯ ಮೋಹನ್ ಕುಮಾರ್ ಮಾತನಾಡಿ, ‘ನಿರಾಶ್ರಿತರ ಸೇವೆಯೇ ದೇವರ ಸೇವೆ’ ಎಂದು ಬಣ್ಣಿಸಿದರು. ಸಂದರ್ಭದ ಕಾಲ ಸುಳಿಗೆ ಸಿಲುಕಿ ಬಂಧು ಬಾಂಧವರ ಒಡನಾಟವಿಲ್ಲದೆ ಜೀವನ ಸಾಗಿಸುತ್ತಿರುವ ಅವರ ನೆರವಿಗೆ ಧಾವಿಸ ಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಬೇಕಿದೆ’ ಎಂದರು.</p>.<p>ರಾಜರಾಜೇಶ್ವರಿ ನಗರಸಭಾ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಂಪುರ ನಾಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ. ಅಮರ್ನಾಥ್, ರಮೇಶ್ ಗೌಡ, ಜ್ಯೋತಿ, ರಾಜೇಶ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>