<p><strong>ಬೆಂಗಳೂರು:</strong> ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿ ಡಾ.ಕೃತಿಕಾ ರೆಡ್ಡಿ ಅವರಿಗೆ ಅನಸ್ತೇಶಿಯಾ ನೀಡಿ ಕೊಲೆ ಮಾಡಿ ‘ಸಹಜ ಸಾವು’ ಎಂಬುದಾಗಿ ಬಿಂಬಿಸಿದ್ದ ಪ್ರಕರಣದಲ್ಲಿ ಆರೋಪಿ ಡಾ.ಜಿ.ಎಸ್.ಮಹೇಂದ್ರ ರೆಡ್ಡಿ ಅವರು ತನ್ನ ಗೆಳತಿಯ ಜತೆಗೆ ಮೊಬೈಲ್ನಲ್ಲಿ ಚಾಟಿಂಗ್ ನಡೆಸಿರುವುದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ. </p>.<p>ಆರೋಪಿ ಬಂಧನದ ಬಳಿಕ ಮೊಬೈಲ್ ಹಾಗೂ ಲ್ಯಾಪ್ಟಾಪ್ ವಶಕ್ಕೆ ಪಡೆದುಕೊಂಡು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್ಎಸ್ಎಲ್) ರವಾನೆ ಮಾಡಲಾಗಿತ್ತು. ಎಫ್ಎಸ್ಎಲ್ ತಜ್ಞರು ಪರಿಶೀಲನೆ ನಡೆಸಿ ವರದಿ ನೀಡಿದ್ದು, ಗೆಳತಿಯ ಜತೆಗೆ ಆರೋಪಿ ಚಾಟಿಂಗ್ ನಡೆಸಿರುವುದು ಪತ್ತೆಯಾಗಿದೆ.</p>.<p>ಪದೇ ಪದೇ ಚಾಟಿಂಗ್ ಮಾಡುತ್ತಿದ್ದಂತೆ ಬೇಸರಗೊಂಡಿದ್ದ ಸ್ನೇಹಿತೆ ಮಹೇಂದ್ರ ರೆಡ್ಡಿ ಅವರ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಲೀಸ್ಟ್ಗೆ ಸೇರಿಸಿದ್ದರು. ಕೆಲವು ಬಾರಿ ಫೋನ್ ಪೇಯಲ್ಲೂ ಆರೋಪಿ ಸಂದೇಶ ಕಳುಹಿಸಿರುವುದು ಪತ್ತೆಯಾಗಿದೆ.</p>.<p>‘ನಿನಗಾಗಿ ನನ್ನ ಪತ್ನಿಯನ್ನು ಕೊಲೆ ಮಾಡಿದ್ದೇನೆ’ ಎಂಬುದಾಗಿ ಆರೋಪಿ ಸಂದೇಶ ಕಳುಹಿಸಿರುವುದು ಸಿಕ್ಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಪ್ರಕರಣದ ಸಂಬಂಧ ಯುವತಿ ಕರೆಸಿ ವಿಚಾರಣೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿ ಡಾ.ಕೃತಿಕಾ ರೆಡ್ಡಿ ಅವರಿಗೆ ಅನಸ್ತೇಶಿಯಾ ನೀಡಿ ಕೊಲೆ ಮಾಡಿ ‘ಸಹಜ ಸಾವು’ ಎಂಬುದಾಗಿ ಬಿಂಬಿಸಿದ್ದ ಪ್ರಕರಣದಲ್ಲಿ ಆರೋಪಿ ಡಾ.ಜಿ.ಎಸ್.ಮಹೇಂದ್ರ ರೆಡ್ಡಿ ಅವರು ತನ್ನ ಗೆಳತಿಯ ಜತೆಗೆ ಮೊಬೈಲ್ನಲ್ಲಿ ಚಾಟಿಂಗ್ ನಡೆಸಿರುವುದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ. </p>.<p>ಆರೋಪಿ ಬಂಧನದ ಬಳಿಕ ಮೊಬೈಲ್ ಹಾಗೂ ಲ್ಯಾಪ್ಟಾಪ್ ವಶಕ್ಕೆ ಪಡೆದುಕೊಂಡು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್ಎಸ್ಎಲ್) ರವಾನೆ ಮಾಡಲಾಗಿತ್ತು. ಎಫ್ಎಸ್ಎಲ್ ತಜ್ಞರು ಪರಿಶೀಲನೆ ನಡೆಸಿ ವರದಿ ನೀಡಿದ್ದು, ಗೆಳತಿಯ ಜತೆಗೆ ಆರೋಪಿ ಚಾಟಿಂಗ್ ನಡೆಸಿರುವುದು ಪತ್ತೆಯಾಗಿದೆ.</p>.<p>ಪದೇ ಪದೇ ಚಾಟಿಂಗ್ ಮಾಡುತ್ತಿದ್ದಂತೆ ಬೇಸರಗೊಂಡಿದ್ದ ಸ್ನೇಹಿತೆ ಮಹೇಂದ್ರ ರೆಡ್ಡಿ ಅವರ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಲೀಸ್ಟ್ಗೆ ಸೇರಿಸಿದ್ದರು. ಕೆಲವು ಬಾರಿ ಫೋನ್ ಪೇಯಲ್ಲೂ ಆರೋಪಿ ಸಂದೇಶ ಕಳುಹಿಸಿರುವುದು ಪತ್ತೆಯಾಗಿದೆ.</p>.<p>‘ನಿನಗಾಗಿ ನನ್ನ ಪತ್ನಿಯನ್ನು ಕೊಲೆ ಮಾಡಿದ್ದೇನೆ’ ಎಂಬುದಾಗಿ ಆರೋಪಿ ಸಂದೇಶ ಕಳುಹಿಸಿರುವುದು ಸಿಕ್ಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಪ್ರಕರಣದ ಸಂಬಂಧ ಯುವತಿ ಕರೆಸಿ ವಿಚಾರಣೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>