<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ):</strong> ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ಹಾಗೂ ಲಿಂಗಸುಗೂರು ಕ್ಷೇತ್ರಗಳಿಗೆ ಕ್ರಮವಾಗಿ ಡಾ.ಶಿವರಾಜ ಪಾಟೀಲ, ಮಾನಪ್ಪ ವಜ್ಜಲ ಅವರಿಗೆ ಟಿಕೆಟ್ ನೀಡುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಘೋಷಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’ಈ ಚುನಾವಣೆಯಲ್ಲಿ ಆಕಾಂಕ್ಷಿಗಳ ಸಾಮರ್ಥ್ಯವನ್ನು ಆಧರಿಸಿ ಟಿಕೆಟ್ ನೀಡುತ್ತೇವೆ. ಪಕ್ಷ ಬಲವರ್ಧನೆಗೆ ದುಡಿದ ಮುಖಂಡರನ್ನು ಗುರುತಿಸಿ, ಆಡಳಿತಕ್ಕೆ ಬಂದ ತಕ್ಷಣ ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ’ ಎಂದು ಹೇಳಿದರು.</p>.<p>‘ನಮ್ಮನ್ನು ಜೈಲಿಗೆ ಹೋಗಿ ಬಂದವರು ಎಂದು ಗೇಲಿ ಮಾಡುತ್ತಿದ್ದವರು ಈಗ ಜೈಲಿಗೆ ಹೋಗಿ ಬಂದ ಶಾಸಕರುಗಳನ್ನೇ ಬಳ್ಳಾರಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಇದು ಅವರ ಅಸಹಾಯಕತೆಯನ್ನು ದೃಢಪಡಿಸುತ್ತದೆ’ ಎಂದು ಟೀಕಿಸಿದರು.</p>.<p>‘ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ, ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ಪ್ರವಾಸ ಮಾಡಿದ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕರ್ನಾಟಕ ಸಹ ಕಾಂಗ್ರೆಸ್ ಮುಕ್ತ ರಾಜ್ಯವಾಗಲಿದೆ’ ಎಂದರು.</p>.<p>**</p>.<p>ರಾಹುಲ್ ಗಾಂಧಿ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪ್ರವಾಸ ಕೈಗೊಳ್ಳುತ್ತಿರುವುದನ್ನು ಸ್ವಾಗತಿಸುತ್ತೇವೆ. ಅವರು ಪ್ರವಾಸ ಮಾಡಿದ ಕಡೆ ಕಾಂಗ್ರೆಸ್ ನಿರ್ನಾಮ ಆಗುತ್ತಿರುವುದಕ್ಕೆ 19 ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಯುತ್ತಿರುವುದೇ ಸಾಕ್ಷಿ. ಅವರ ಬರುವಿಕೆ ಬಿಜೆಪಿಗೆ ಶುಭ ಸಂಕೇತ.<br /> <em><strong>–ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ):</strong> ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ಹಾಗೂ ಲಿಂಗಸುಗೂರು ಕ್ಷೇತ್ರಗಳಿಗೆ ಕ್ರಮವಾಗಿ ಡಾ.ಶಿವರಾಜ ಪಾಟೀಲ, ಮಾನಪ್ಪ ವಜ್ಜಲ ಅವರಿಗೆ ಟಿಕೆಟ್ ನೀಡುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಘೋಷಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’ಈ ಚುನಾವಣೆಯಲ್ಲಿ ಆಕಾಂಕ್ಷಿಗಳ ಸಾಮರ್ಥ್ಯವನ್ನು ಆಧರಿಸಿ ಟಿಕೆಟ್ ನೀಡುತ್ತೇವೆ. ಪಕ್ಷ ಬಲವರ್ಧನೆಗೆ ದುಡಿದ ಮುಖಂಡರನ್ನು ಗುರುತಿಸಿ, ಆಡಳಿತಕ್ಕೆ ಬಂದ ತಕ್ಷಣ ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ’ ಎಂದು ಹೇಳಿದರು.</p>.<p>‘ನಮ್ಮನ್ನು ಜೈಲಿಗೆ ಹೋಗಿ ಬಂದವರು ಎಂದು ಗೇಲಿ ಮಾಡುತ್ತಿದ್ದವರು ಈಗ ಜೈಲಿಗೆ ಹೋಗಿ ಬಂದ ಶಾಸಕರುಗಳನ್ನೇ ಬಳ್ಳಾರಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಇದು ಅವರ ಅಸಹಾಯಕತೆಯನ್ನು ದೃಢಪಡಿಸುತ್ತದೆ’ ಎಂದು ಟೀಕಿಸಿದರು.</p>.<p>‘ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ, ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ಪ್ರವಾಸ ಮಾಡಿದ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕರ್ನಾಟಕ ಸಹ ಕಾಂಗ್ರೆಸ್ ಮುಕ್ತ ರಾಜ್ಯವಾಗಲಿದೆ’ ಎಂದರು.</p>.<p>**</p>.<p>ರಾಹುಲ್ ಗಾಂಧಿ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪ್ರವಾಸ ಕೈಗೊಳ್ಳುತ್ತಿರುವುದನ್ನು ಸ್ವಾಗತಿಸುತ್ತೇವೆ. ಅವರು ಪ್ರವಾಸ ಮಾಡಿದ ಕಡೆ ಕಾಂಗ್ರೆಸ್ ನಿರ್ನಾಮ ಆಗುತ್ತಿರುವುದಕ್ಕೆ 19 ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಯುತ್ತಿರುವುದೇ ಸಾಕ್ಷಿ. ಅವರ ಬರುವಿಕೆ ಬಿಜೆಪಿಗೆ ಶುಭ ಸಂಕೇತ.<br /> <em><strong>–ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>