‘ಸದ್ಯಕ್ಕೆ ಒಪಿಡಿ ಬಂದ್ ನಿರ್ಧಾರವನ್ನು ವಾಪಸ್ ಪಡೆಯುವುದಿಲ್ಲ. ಬೆಳಿಗ್ಗೆ ಪ್ರತಿಭಟನಾ ಸ್ಥಳದಲ್ಲಿ ಚರ್ಚಿಸಿ, ನಿರ್ಣಯ ಕೈಗೊಳ್ಳಲಾಗುವುದು. ರೋಗಿಗಳಿಗೆ ತೊಂದರೆ ಆಗಬಾರದುಎನ್ನುವುದು ನಮ್ಮ ಆಶಯವಾಗಿದೆ. ಹಲ್ಲೆ ಮಾಡಿದವರು ಶರಣಾಗತರಾಗಲು ಮುಂದೆ ಬಂದಿರುವುದು ಸ್ವಾಗತಾರ್ಹ. ಆದರೆ, ಪೊಲೀಸರು ಅವರನ್ನು ಬಂಧಿಸುವವರೆಗೂ ನಾವು ಹಿಂದೆ ಸರಿಯುವುದಿಲ್ಲ’ಎಂದು ಐಎಂಎ ರಾಜ್ಯ ಶಾಖೆ ಕಾರ್ಯದರ್ಶಿ ಡಾ.ಎಸ್.ಶ್ರೀನಿವಾಸ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.