<p><strong>ಬೆಂಗಳೂರು: </strong>ನಗರದಲ್ಲಿ ಸ್ಮಶಾನ ಮತ್ತು ವಿದ್ಯುತ್ ಚಿತಾಗಾರದ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ನಂತರ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವು ಶುಕ್ರವಾರ ಕಲ್ಲಹಳ್ಳಿ ವಿದ್ಯುತ್ ಚಿತಾಗಾರಕ್ಕೆ ಭೇಟಿ ನೀಡಿ, ಸಿಬ್ಬಂದಿಯ ಅಹವಾಲು ಆಲಿಸಿತು.</p>.<p>ಆಯೋಗದ ಸದಸ್ಯ, ವಕೀಲ ಎಚ್. ವೆಂಕಟೇಶ ದೊಡ್ಡೇರಿ ಅವರು, ಚಿತಾಗಾರ ಸಿಬ್ಬಂದಿ ಮತ್ತು ಅವರ ಕುಟುಂಬದವರೊಂದಿಗೆ ಮಾತನಾಡಿ, ಸಮಸ್ಯೆ ಆಲಿಸಿದರು.</p>.<p>‘ನೌಕರರಿಗೆ ಸಂಬಳ ನೀಡಬೇಕು, ಅವರಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ಅವರ ಮಕ್ಕಳ ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ, ಕಾಯಂ ವಸತಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಕೋವಿಡ್ ಶವಗಳ ಸಂಸ್ಕಾರದ ವೇಳೆ ಬೇಕಾಗುವ ಅಗತ್ಯ ಸುರಕ್ಷಾ ಪರಿಕರಗಳನ್ನು ಸಿಬ್ಬಂದಿಗೆ ಒದಗಿಸಬೇಕು’ ಎಂದೂ ಅವರು ಹೇಳಿದರು.</p>.<p>ಬಿಬಿಎಂಪಿ ವಿಶೇಷ ಆಯುಕ್ತ ಡಿ. ರಂದೀಪ್, ‘ಬಿಬಿಎಂಪಿಯಲ್ಲಿ ಸ್ಮಶಾನ ಮತ್ತು ವಿದ್ಯುತ್ ಚಿತಾಗಾರ ಸಿಬ್ಬಂದಿಯ ಪೈಕಿ ಶೇ 95 ಮಂದಿಗೆ ವೇತನ ಬಿಡುಗಡೆ ಮಾಡಲಾಗಿದೆ. ಉಳಿದ ಶೇ 5ರಷ್ಟು ಸಿಬ್ಬಂದಿಗೆ ಕೂಡಲೇ ವೇತನ ನೀಡಲಾಗುವುದು’ ಎಂದರು.</p>.<p>‘ಚಿತಾಗಾರ ಸಿಬ್ಬಂದಿಗೆ ಸಮವಸ್ತ್ರ ನೀಡುವುದು, ಅವರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ನೀತಿ ರೂಪಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಬಿಬಿಎಂಪಿ ಉಪ ಆಯುಕ್ತ ರಂಗನಾಥ, ಸ್ಮಶಾನ ನೌಕರರ ಸಂಘದ ಅಧ್ಯಕ್ಷ ಆ. ಸುರೇಶ್, ಕಾರ್ಯದರ್ಶಿ ರಾಜು ಕಲ್ಲಹಳ್ಳಿ ಇದ್ದರು.</p>.<p>ಚಿತಾಗಾರ ಸಿಬ್ಬಂದಿಗೆ 10 ತಿಂಗಳಿನಿಂದ ವೇತನ ಪಾವತಿಯಾಗದಿರುವ ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಸ್ಮಶಾನ ಮತ್ತು ವಿದ್ಯುತ್ ಚಿತಾಗಾರದ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ನಂತರ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವು ಶುಕ್ರವಾರ ಕಲ್ಲಹಳ್ಳಿ ವಿದ್ಯುತ್ ಚಿತಾಗಾರಕ್ಕೆ ಭೇಟಿ ನೀಡಿ, ಸಿಬ್ಬಂದಿಯ ಅಹವಾಲು ಆಲಿಸಿತು.</p>.<p>ಆಯೋಗದ ಸದಸ್ಯ, ವಕೀಲ ಎಚ್. ವೆಂಕಟೇಶ ದೊಡ್ಡೇರಿ ಅವರು, ಚಿತಾಗಾರ ಸಿಬ್ಬಂದಿ ಮತ್ತು ಅವರ ಕುಟುಂಬದವರೊಂದಿಗೆ ಮಾತನಾಡಿ, ಸಮಸ್ಯೆ ಆಲಿಸಿದರು.</p>.<p>‘ನೌಕರರಿಗೆ ಸಂಬಳ ನೀಡಬೇಕು, ಅವರಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ಅವರ ಮಕ್ಕಳ ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ, ಕಾಯಂ ವಸತಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಕೋವಿಡ್ ಶವಗಳ ಸಂಸ್ಕಾರದ ವೇಳೆ ಬೇಕಾಗುವ ಅಗತ್ಯ ಸುರಕ್ಷಾ ಪರಿಕರಗಳನ್ನು ಸಿಬ್ಬಂದಿಗೆ ಒದಗಿಸಬೇಕು’ ಎಂದೂ ಅವರು ಹೇಳಿದರು.</p>.<p>ಬಿಬಿಎಂಪಿ ವಿಶೇಷ ಆಯುಕ್ತ ಡಿ. ರಂದೀಪ್, ‘ಬಿಬಿಎಂಪಿಯಲ್ಲಿ ಸ್ಮಶಾನ ಮತ್ತು ವಿದ್ಯುತ್ ಚಿತಾಗಾರ ಸಿಬ್ಬಂದಿಯ ಪೈಕಿ ಶೇ 95 ಮಂದಿಗೆ ವೇತನ ಬಿಡುಗಡೆ ಮಾಡಲಾಗಿದೆ. ಉಳಿದ ಶೇ 5ರಷ್ಟು ಸಿಬ್ಬಂದಿಗೆ ಕೂಡಲೇ ವೇತನ ನೀಡಲಾಗುವುದು’ ಎಂದರು.</p>.<p>‘ಚಿತಾಗಾರ ಸಿಬ್ಬಂದಿಗೆ ಸಮವಸ್ತ್ರ ನೀಡುವುದು, ಅವರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ನೀತಿ ರೂಪಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಬಿಬಿಎಂಪಿ ಉಪ ಆಯುಕ್ತ ರಂಗನಾಥ, ಸ್ಮಶಾನ ನೌಕರರ ಸಂಘದ ಅಧ್ಯಕ್ಷ ಆ. ಸುರೇಶ್, ಕಾರ್ಯದರ್ಶಿ ರಾಜು ಕಲ್ಲಹಳ್ಳಿ ಇದ್ದರು.</p>.<p>ಚಿತಾಗಾರ ಸಿಬ್ಬಂದಿಗೆ 10 ತಿಂಗಳಿನಿಂದ ವೇತನ ಪಾವತಿಯಾಗದಿರುವ ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>