ಬೆಂಗಳೂರು: ನಗರದಲ್ಲಿ ಸ್ಮಶಾನ ಮತ್ತು ವಿದ್ಯುತ್ ಚಿತಾಗಾರದ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ನಂತರ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವು ಶುಕ್ರವಾರ ಕಲ್ಲಹಳ್ಳಿ ವಿದ್ಯುತ್ ಚಿತಾಗಾರಕ್ಕೆ ಭೇಟಿ ನೀಡಿ, ಸಿಬ್ಬಂದಿಯ ಅಹವಾಲು ಆಲಿಸಿತು.