ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಕ್ಯೂರಿಟಿ ಗಾರ್ಡ್‌ ಮೇಲೆ ನಾಯಿ ಛೂ ಬಿಟ್ಟರು!

Last Updated 2 ಮಾರ್ಚ್ 2020, 19:34 IST
ಅಕ್ಷರ ಗಾತ್ರ

ಬೆಂಗಳೂರು: ಅಪಾರ್ಟ್‌ಮೆಂಟ್ ಮುಂಭಾಗದಲ್ಲಿ ಕಸ ಎಸೆಯಬೇಡಿ ಎಂದು ಹೇಳಿದ ಸೆಕ್ಯೂರಿಟಿ ಗಾರ್ಡ್‌ ಮೇಲೆ ವ್ಯಕ್ತಿಯೊಬ್ಬರು ನಾಯಿ ಛೂ ಬಿಟ್ಟ ಘಟನೆ ಗಿರಿನಗರದ ಈರಣ್ಣಗುಡ್ಡದಲ್ಲಿ ನಡೆದಿದೆ.

ನಾಯಿ ಕಚ್ಚಿ ಗಾಯಗೊಂಡಿರುವ ಸುರೇಶ್ ಮೂರ್ತಿ ಎಂಬುವವರು ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಬಲಗೈಯನ್ನು ನಾಯಿ ಕಚ್ಚಿದ್ದು, ಆಳವಾದ ಗಾಯವಾಗಿದೆ.

‘ಪಕ್ಕದ ಮನೆಯ ನಿವಾಸಿಯೊಬ್ಬರಿಗೆ ಕಸ ಹಾಕಬೇಡಿ ಎಂದು ಹೇಳಿದ್ದಕ್ಕೆ ನಾಯಿ ಛೂ ಬಿಟ್ಟು, ಕಚ್ಚುವಂತೆ ಮಾಡಿದ್ದಾರೆ ಎಂದು ಗೊತ್ತಾಗಿದೆ. ಆದರೆ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ದೂರು ನೀಡಿದರೆ ಈ ಬಗ್ಗೆ ಕ್ರಮ ವಹಿಸಲಾಗುವುದು’ ಎಂದು ಗಿರಿನಗರ ಠಾಣೆಯ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT