<p><strong>ಬೆಂಗಳೂರು:</strong> ಅಪರಾಧ ಪ್ರಕರಣಗಳ ಪತ್ತೆ ಹಾಗೂ ಭಯೋತ್ಪಾದನಾ ಕೃತ್ಯಗಳನ್ನು ಮಟ್ಟಹಾಕಲು ನಗರದ ಶ್ವಾನ ಪಡೆ ಸಜ್ಜಾಗಿದೆ. ಪಡೆಯ ಶ್ವಾನಗಳಿಗೆ ಆಧುನಿಕ ತರಬೇತಿಯನ್ನು ನೀಡಲಾಗಿದ್ದು, ಅವುಗಳ ಚಟುವಟಿಕೆಗೆಂದೇ ನಗರದ ಆಡುಗೋಡಿಯ ಸಿಎಆರ್ (ದಕ್ಷಿಣ) ಮೈದಾನದಲ್ಲಿ ಸುಸಜ್ಜಿತ ಉದ್ಯಾನ ನಿರ್ಮಿಸಲಾಗಿದೆ.</p>.<p>ಮೊದಲಿದ್ದ ಉದ್ಯಾನವನ್ನೇ ಉನ್ನತೀಕರಿಸಿ ಹೊಸದಾಗಿ ಈ ಉದ್ಯಾನ ನಿರ್ಮಿಸಲಾಗಿದೆ. ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಮಂಗಳವಾರ ಉದ್ಯಾನ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, 'ಪೊಲೀಸ್ ಶ್ವಾನದಳವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹2.5 ಕೋಟಿ ವೆಚ್ಚದಲ್ಲಿ 50 ಶ್ವಾನಗಳನ್ನು ಹೊಸದಾಗಿ ಪಡೆಗೆ ಸೇರಿಸಿಕೊಳ್ಳಲಾಗುವುದು' ಎಂದರು.</p>.<p>'ಸ್ಪೋಟಕ, ಡ್ರಗ್ಸ್ ಪತ್ತೆಹಚ್ಚುವ ಹಾಗೂ ಅಪರಾಧ ಸ್ಥಳದಲ್ಲಿ ಅಪರಾಧಿಯನ್ನು ಪತ್ತೆ ಹಚ್ಚುವಲ್ಲಿ ಶ್ವಾನಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ಪಡೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವುಗಳಿಗೆ ಅತ್ಯುತ್ತಮ ತರಬೇತಿ ನೀಡುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ಸಿಎಆರ್ (ದಕ್ಷಿಣ) ಡಿಸಿಪಿ ಯೋಗೇಶ್ ಹಾಗೂ ಎಸಿಪಿ ನಿಂಗಾರೆಡ್ಡಿ ಪಾಟೀಲ ನೇತೃತ್ವದಲ್ಲಿ ಶ್ವಾನ ಚಟುವಟಿಕೆಯ ಉದ್ಯಾನವನ್ನು ಉನ್ನತೀಕರಿಸಲಾಗಿದೆ' ಎಂದರು.</p>.<p>'ಶ್ವಾನ ಗುರು ಎಂದೇ ಪ್ರಸಿದ್ದಿಯಾಗಿರುವ ಶ್ವಾನಗಳ ಮನೋ ವೈದ್ಯ ಅಮೃತ್ ಹಿರಣ್ಯ ಉದ್ಯಾನ ನಿರ್ಮಾಣಕ್ಕೆ ಸಲಹೆಗಳನ್ನು ನೀಡಿದ್ದಾರೆ. ಈ ಉದ್ಯಾನವನ್ನು ಸಿಬ್ಬಂದಿಗಳೇ ನಿರ್ಮಿಸಿದ್ದಾರೆ. ಮುಂದಿನ ದಿನದಲ್ಲಿ ಮಹಿಳಾ ಕಾನ್ಸ್ಟೆಬಲ್ಗಳನ್ನು ಡಾಗ್ ಹ್ಯಾಂಡ್ಲರ್ಗಳಾಗಿ ನೇಮಿಸಲು ಚಿಂತನೆ ನಡೆಯುತ್ತಿದೆ' ಎಂದರು.</p>.<p>ಉದ್ಯಾನ ಉದ್ಘಾಟನೆ ಬಳಿಕ ಅಮೃತ್ ಹಿರಣ್ಯ ಅವರ ತರಬೇತಿಯಂತೆ ಶ್ವಾನಗಳ ಪರೇಡ್ ನಡೆಯಿತು. ವಾಹನಗಳ ಬೆನ್ನಟ್ಟುವುದು, ಸ್ಫೋಟಕ ಹಾಗೂ ಡಗ್ರ ಪತ್ತೆ, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಹಾಗೂ ಹಲವು ರೀತಿಯ ಕಾರ್ಯಾಚರಣೆಯನ್ನು ಶ್ವಾನಪಡೆ ಪ್ರದರ್ಶಿಸಿತು.</p>.<p>ಕಾರ್ಯಕ್ರಮದಲ್ಲಿ ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ, ಕಮಾಂಡ್ ಸೆಂಟರ್ ಡಿಸಿಪಿ ಇಶಾ ಪಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಪರಾಧ ಪ್ರಕರಣಗಳ ಪತ್ತೆ ಹಾಗೂ ಭಯೋತ್ಪಾದನಾ ಕೃತ್ಯಗಳನ್ನು ಮಟ್ಟಹಾಕಲು ನಗರದ ಶ್ವಾನ ಪಡೆ ಸಜ್ಜಾಗಿದೆ. ಪಡೆಯ ಶ್ವಾನಗಳಿಗೆ ಆಧುನಿಕ ತರಬೇತಿಯನ್ನು ನೀಡಲಾಗಿದ್ದು, ಅವುಗಳ ಚಟುವಟಿಕೆಗೆಂದೇ ನಗರದ ಆಡುಗೋಡಿಯ ಸಿಎಆರ್ (ದಕ್ಷಿಣ) ಮೈದಾನದಲ್ಲಿ ಸುಸಜ್ಜಿತ ಉದ್ಯಾನ ನಿರ್ಮಿಸಲಾಗಿದೆ.</p>.<p>ಮೊದಲಿದ್ದ ಉದ್ಯಾನವನ್ನೇ ಉನ್ನತೀಕರಿಸಿ ಹೊಸದಾಗಿ ಈ ಉದ್ಯಾನ ನಿರ್ಮಿಸಲಾಗಿದೆ. ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಮಂಗಳವಾರ ಉದ್ಯಾನ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, 'ಪೊಲೀಸ್ ಶ್ವಾನದಳವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹2.5 ಕೋಟಿ ವೆಚ್ಚದಲ್ಲಿ 50 ಶ್ವಾನಗಳನ್ನು ಹೊಸದಾಗಿ ಪಡೆಗೆ ಸೇರಿಸಿಕೊಳ್ಳಲಾಗುವುದು' ಎಂದರು.</p>.<p>'ಸ್ಪೋಟಕ, ಡ್ರಗ್ಸ್ ಪತ್ತೆಹಚ್ಚುವ ಹಾಗೂ ಅಪರಾಧ ಸ್ಥಳದಲ್ಲಿ ಅಪರಾಧಿಯನ್ನು ಪತ್ತೆ ಹಚ್ಚುವಲ್ಲಿ ಶ್ವಾನಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ಪಡೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವುಗಳಿಗೆ ಅತ್ಯುತ್ತಮ ತರಬೇತಿ ನೀಡುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ಸಿಎಆರ್ (ದಕ್ಷಿಣ) ಡಿಸಿಪಿ ಯೋಗೇಶ್ ಹಾಗೂ ಎಸಿಪಿ ನಿಂಗಾರೆಡ್ಡಿ ಪಾಟೀಲ ನೇತೃತ್ವದಲ್ಲಿ ಶ್ವಾನ ಚಟುವಟಿಕೆಯ ಉದ್ಯಾನವನ್ನು ಉನ್ನತೀಕರಿಸಲಾಗಿದೆ' ಎಂದರು.</p>.<p>'ಶ್ವಾನ ಗುರು ಎಂದೇ ಪ್ರಸಿದ್ದಿಯಾಗಿರುವ ಶ್ವಾನಗಳ ಮನೋ ವೈದ್ಯ ಅಮೃತ್ ಹಿರಣ್ಯ ಉದ್ಯಾನ ನಿರ್ಮಾಣಕ್ಕೆ ಸಲಹೆಗಳನ್ನು ನೀಡಿದ್ದಾರೆ. ಈ ಉದ್ಯಾನವನ್ನು ಸಿಬ್ಬಂದಿಗಳೇ ನಿರ್ಮಿಸಿದ್ದಾರೆ. ಮುಂದಿನ ದಿನದಲ್ಲಿ ಮಹಿಳಾ ಕಾನ್ಸ್ಟೆಬಲ್ಗಳನ್ನು ಡಾಗ್ ಹ್ಯಾಂಡ್ಲರ್ಗಳಾಗಿ ನೇಮಿಸಲು ಚಿಂತನೆ ನಡೆಯುತ್ತಿದೆ' ಎಂದರು.</p>.<p>ಉದ್ಯಾನ ಉದ್ಘಾಟನೆ ಬಳಿಕ ಅಮೃತ್ ಹಿರಣ್ಯ ಅವರ ತರಬೇತಿಯಂತೆ ಶ್ವಾನಗಳ ಪರೇಡ್ ನಡೆಯಿತು. ವಾಹನಗಳ ಬೆನ್ನಟ್ಟುವುದು, ಸ್ಫೋಟಕ ಹಾಗೂ ಡಗ್ರ ಪತ್ತೆ, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಹಾಗೂ ಹಲವು ರೀತಿಯ ಕಾರ್ಯಾಚರಣೆಯನ್ನು ಶ್ವಾನಪಡೆ ಪ್ರದರ್ಶಿಸಿತು.</p>.<p>ಕಾರ್ಯಕ್ರಮದಲ್ಲಿ ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ, ಕಮಾಂಡ್ ಸೆಂಟರ್ ಡಿಸಿಪಿ ಇಶಾ ಪಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>