<p><strong>ಬೆಂಗಳೂರು:</strong> ಕಾರಿನ ಮೇಲೆ ಶ್ವಾನ ಮೂತ್ರ ಮಾಡಿತೆಂಬ ಕಾರಣಕ್ಕೆ ಅದರ ಮಾಲೀಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಲಾಗಿದ್ದು, ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಭಾನುವಾರ ರಾತ್ರಿ ನಡೆದಿರುವ ಘಟನೆ ಬಗ್ಗೆ ಗಾಯಾಳು ಗೇರಿ ರೊಜಾರಿಯೊ ಎಂಬುವವರು ದೂರು ನೀಡಿದ್ದಾರೆ. ಕಾರಿನ ಮಾಲೀಕ ಚಾರ್ಲ್ಸ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಎಚ್ಎಎಲ್ ನಿವೃತ್ತ ಉದ್ಯೋಗಿ ಗೇರಿ, ತಮ್ಮ ಶ್ವಾನದ ಜೊತೆ ವಾಯುವಿಹಾರ ಮಾಡುತ್ತಿದ್ದರು. ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಶ್ವಾನ ಮೂತ್ರ ವಿಸರ್ಜನೆ ಮಾಡಿತ್ತು. ಅದನ್ನು ನೋಡಿದ್ದ ಕಾರಿನ ಮಾಲೀಕ ಚಾರ್ಲ್ಸ್, ಈ ಬಗ್ಗೆ ಪ್ರಶ್ನಿಸಿದ್ದರು. ಗೇರಿ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದರು. ಅದೇ ವಿಚಾರವಾಗಿ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.’</p>.<p>‘ಕೋಪಗೊಂಡಿದ್ದ ಚಾರ್ಲ್ಸ್, ಗೇರಿ ಅವರಿಗೆ ಕಲ್ಲಿನಿಂದ ಹೊಡೆದಿದ್ದರು. ತೀವ್ರ ಗಾಯಗೊಂಡ ಗೇರಿ, ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ನಂತರ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದಾರೆ’ ಎಂದೂ ಪೊಲೀಸ್ ಮೂಲಗಳು<br />ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾರಿನ ಮೇಲೆ ಶ್ವಾನ ಮೂತ್ರ ಮಾಡಿತೆಂಬ ಕಾರಣಕ್ಕೆ ಅದರ ಮಾಲೀಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಲಾಗಿದ್ದು, ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಭಾನುವಾರ ರಾತ್ರಿ ನಡೆದಿರುವ ಘಟನೆ ಬಗ್ಗೆ ಗಾಯಾಳು ಗೇರಿ ರೊಜಾರಿಯೊ ಎಂಬುವವರು ದೂರು ನೀಡಿದ್ದಾರೆ. ಕಾರಿನ ಮಾಲೀಕ ಚಾರ್ಲ್ಸ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಎಚ್ಎಎಲ್ ನಿವೃತ್ತ ಉದ್ಯೋಗಿ ಗೇರಿ, ತಮ್ಮ ಶ್ವಾನದ ಜೊತೆ ವಾಯುವಿಹಾರ ಮಾಡುತ್ತಿದ್ದರು. ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಶ್ವಾನ ಮೂತ್ರ ವಿಸರ್ಜನೆ ಮಾಡಿತ್ತು. ಅದನ್ನು ನೋಡಿದ್ದ ಕಾರಿನ ಮಾಲೀಕ ಚಾರ್ಲ್ಸ್, ಈ ಬಗ್ಗೆ ಪ್ರಶ್ನಿಸಿದ್ದರು. ಗೇರಿ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದರು. ಅದೇ ವಿಚಾರವಾಗಿ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.’</p>.<p>‘ಕೋಪಗೊಂಡಿದ್ದ ಚಾರ್ಲ್ಸ್, ಗೇರಿ ಅವರಿಗೆ ಕಲ್ಲಿನಿಂದ ಹೊಡೆದಿದ್ದರು. ತೀವ್ರ ಗಾಯಗೊಂಡ ಗೇರಿ, ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ನಂತರ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದಾರೆ’ ಎಂದೂ ಪೊಲೀಸ್ ಮೂಲಗಳು<br />ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>