‘ಚಾಮರಾಜಪೇಟೆಯಲ್ಲಿರುವ ನಗರ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಬೀದಿನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಿಸಲಾಗುತ್ತಿದೆ. ಈ ಶಸ್ತ್ರಚಿಕಿತ್ಸೆ ವೇಳೆಯಲ್ಲೇ ಸೋಂಕು ತಗುಲುತ್ತಿರುವ ಅನುಮಾನವಿದೆ. ಹೀಗಾಗಿ, ಶಸ್ತ್ರಚಿಕಿತ್ಸೆ ಬಳಿಕ ಬಿಡುಗಡೆಗೊಳಿಸುವ ನಾಯಿಗಳು, ಕೆಲವೇ ದಿನಗಳಲ್ಲಿ ಮೃತಪಡುತ್ತಿರುವುದಾಗಿ ದೂರುದಾರರು ಆರೋಪಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.