ಬೆಂಗಳೂರು: ‘ಮದುವೆಯಾಗಿ ತಿಂಗಳಾಗಿದೆ. ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವ ಪತಿ, ಕನ್ಯತ್ವ ಪರೀಕ್ಷೆ ಮಾಡಿಸುವಂತೆ ಪೀಡಿಸುತ್ತಿದ್ದಾರೆ’ ಎಂದು ಆರೋಪಿಸಿ ಮಹಿಳೆಯೊಬ್ಬರು ಬಂಡೆಪಾಳ್ಯ ಠಾಣೆಗೆ ದೂರು ನೀಡಿದ್ದಾರೆ.
‘ಮಹಿಳೆ ನೀಡಿರುವ ದೂರು ಆಧರಿಸಿ, ಪತಿ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಸ್ಥಳೀಯ ನಿವಾಸಿಯಾದ ಮಹಿಳೆಯನ್ನು ತಿಂಗಳ ಹಿಂದಷ್ಟೇ ಮದುವೆ ಮಾಡಿಕೊಡಲಾಗಿತ್ತು. ಮದುವೆಯಾಗಿ ಒಂದೇ ತಿಂಗಳಿನಲ್ಲೇ ಪತಿ, ಕನ್ಯತ್ವ ಪರೀಕ್ಷೆ ಮಾಡಿಸುವಂತೆ ಪೀಡಿಸುತ್ತಿದ್ದಾರೆ. ಇದಕ್ಕೆ ಕುಟುಂಬಸ್ಥರು ಸಹಕಾರ ನೀಡುತ್ತಿದ್ದಾರೆ’ ಎಂದೂ ತಿಳಿಸಿದರು.