<p><strong>ಬೆಂಗಳೂರು</strong>: ಕೌಟುಂಬಿಕ ಕಲಹ ಹಾಗೂ ಆರೋಗ್ಯ ಸಮಸ್ಯೆಯಿಂದ ಬೇಸತ್ತ ಗೃಹಿಣಿಯೊಬ್ಬರು, ಎರಡು ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ನಡೆದಿದೆ.</p>.<p>ಶೃತಿಕಾ (2) ಎಂಬ ಮಗು ಮೃತಪಟ್ಟಿದ್ದು, ತಾಯಿ ಚಿನ್ನಾ (24) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>‘ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಲಕ್ಷ್ಮೀನಾರಾಯಣ–ಚಿನ್ನಾ ದಂಪತಿ ಮೂರು ತಿಂಗಳ ಹಿಂದೆ ಸೀಗೆಹಳ್ಳಿಗೆ ಬಂದು ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಚಿನ್ನಾ ಅವರಿಗೆ ಆರೋಗ್ಯ ಸಮಸ್ಯೆಯಿತ್ತು. ಮನೆಯಲ್ಲಿ ನಡೆಯುತ್ತಿದ್ದ ಗಲಾಟೆಯಿಂದ ಅವರು ಬೇಸತ್ತಿದ್ದರು ಎನ್ನಲಾಗಿದೆ’</p>.<p>‘ಮನೆಯಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ನಡೆದಾಗ ಮಗುವನ್ನು ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದರು. ಪತಿ ಬುದ್ಧಿಮಾತು ಹೇಳುತ್ತಿದ್ದರು. ಆ ಸಂದರ್ಭದಲ್ಲಿ ಸುಮ್ಮನಾಗುತ್ತಿದ್ದರು. ಮಾರ್ಚ್ 17ರಂದು ಪತಿ ಲಕ್ಷ್ಮೀನಾರಾಯಣ ಅವರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಮಗುವನ್ನು ಕೊಂದ ಬಳಿಕ ಪತಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ಅವರು ತಕ್ಷಣವೇ ಪಕ್ಕದ ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅವರು ಬಂದು ನೋಡುವಷ್ಟರಲ್ಲಿ ಮಗು ಮೃತಪಟ್ಟಿತ್ತು’ ಎಂದು ಮೂಲಗಳು ಹೇಳಿವೆ.</p>.<p>ಲಕ್ಷ್ಮೀನಾರಾಯಣ ನೀಡಿದ ಹೇಳಿಕೆ ಆಧರಿಸಿ, ಕೆ.ಆರ್.ಪುರಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೌಟುಂಬಿಕ ಕಲಹ ಹಾಗೂ ಆರೋಗ್ಯ ಸಮಸ್ಯೆಯಿಂದ ಬೇಸತ್ತ ಗೃಹಿಣಿಯೊಬ್ಬರು, ಎರಡು ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ನಡೆದಿದೆ.</p>.<p>ಶೃತಿಕಾ (2) ಎಂಬ ಮಗು ಮೃತಪಟ್ಟಿದ್ದು, ತಾಯಿ ಚಿನ್ನಾ (24) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>‘ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಲಕ್ಷ್ಮೀನಾರಾಯಣ–ಚಿನ್ನಾ ದಂಪತಿ ಮೂರು ತಿಂಗಳ ಹಿಂದೆ ಸೀಗೆಹಳ್ಳಿಗೆ ಬಂದು ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಚಿನ್ನಾ ಅವರಿಗೆ ಆರೋಗ್ಯ ಸಮಸ್ಯೆಯಿತ್ತು. ಮನೆಯಲ್ಲಿ ನಡೆಯುತ್ತಿದ್ದ ಗಲಾಟೆಯಿಂದ ಅವರು ಬೇಸತ್ತಿದ್ದರು ಎನ್ನಲಾಗಿದೆ’</p>.<p>‘ಮನೆಯಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ನಡೆದಾಗ ಮಗುವನ್ನು ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದರು. ಪತಿ ಬುದ್ಧಿಮಾತು ಹೇಳುತ್ತಿದ್ದರು. ಆ ಸಂದರ್ಭದಲ್ಲಿ ಸುಮ್ಮನಾಗುತ್ತಿದ್ದರು. ಮಾರ್ಚ್ 17ರಂದು ಪತಿ ಲಕ್ಷ್ಮೀನಾರಾಯಣ ಅವರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಮಗುವನ್ನು ಕೊಂದ ಬಳಿಕ ಪತಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ಅವರು ತಕ್ಷಣವೇ ಪಕ್ಕದ ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅವರು ಬಂದು ನೋಡುವಷ್ಟರಲ್ಲಿ ಮಗು ಮೃತಪಟ್ಟಿತ್ತು’ ಎಂದು ಮೂಲಗಳು ಹೇಳಿವೆ.</p>.<p>ಲಕ್ಷ್ಮೀನಾರಾಯಣ ನೀಡಿದ ಹೇಳಿಕೆ ಆಧರಿಸಿ, ಕೆ.ಆರ್.ಪುರಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>