ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನಿಖೆ ದಾರಿತಪ್ಪಿಸುವಂತೆ ಮಾತನಾಡಬೇಡಿ: ಎಚ್‌ಡಿಕೆಗೆ ಕಾರಜೋಳ ತಾಕೀತು

Last Updated 22 ಜನವರಿ 2020, 6:50 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯನ್ನೇ ದಾರಿ ತಪ್ಪಿಸುವಂತೆ ಯಾರೂ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಈ ರೀತಿಯ ‌ಪ್ರಕರಣ ಆದಾಗ ಸರ್ಕಾರ ‌ಪೂರ್ವಾಗ್ರಹ ಪೀಡಿತ ಆಗಿರುವುದಿಲ್ಲ. ಸತ್ಯ- ಅಸತ್ಯದ ಬಗ್ಗೆ ಪರಿಶೀಲನೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕು’ಎಂದರು.

ಕೆಲವರು ಪೊಲೀಸರ ನೈತಿಕತೆಯೇ ಕುಸಿಯುವಂತೆ ಮಾತನಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದವರು. ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಸಲಹೆ ನೀಡಿದರು. ‘ಮುಖ್ಯಮಂತ್ರಿ ವಿದೇಶ ಪ್ರವಾಸದಿಂದ ಬಂದ ಕೂಡಲೇ ಸಂಪುಟ ವಿಸ್ತರಣೆ ಆಗಲಿದೆ' ಎಂದು ತಿಳಿಸಿದರು.

ಕತೆ ಸೃಷ್ಟಿಸಬಾರದು ಎಂದಿದ್ದ ಎಚ್‌ಡಿಕೆ

ಚಿಕ್ಕಮಗಳೂರು ಜಿಲ್ಲೆಯಶೃಂಗೇರಿಯಲ್ಲಿ ಮಾತನಾಡಿದ್ದ ಎಚ್‌.ಡಿ.ಕುಮಾರಸ್ವಾಮಿ, ‘ಮಂಗಳೂರಿನ ವಿಮಾನ ನಿಲ್ದಾಣದ ಬಳಿ ಬಾಂಬ್‌ ಇಟ್ಟಿದ್ದು ಯಾರು ಎಂಬುದನ್ನು ಪತ್ತೆ ಹಚ್ಚಬೇಕು. ಪೊಲೀಸರು ಪತ್ತೆ ಕಾರ್ಯಕ್ಕೆ 15 ದಿನ ಅಥವಾ ತಿಂಗಳು ಸಮಯ ತೆಗೆದುಕೊಂಡು ಹೊಸ ಕತೆ ಸೃಷ್ಟಿಸಬಾರದು.ಕೆಲವರನ್ನು ಮೆಚ್ಚಿಸಲು ಅಧಿಕಾರಿಗಳು ಸಂಶಯಾತ್ಮಕ ಹೇಳಿಕೆ ನೀಡುತ್ತಾರೆ. ಅದಕ್ಕೆ ಆಸ್ಪದ ನೀಡಬಾರದು. ಸಂಘರ್ಷಕ್ಕೆ ಎಡೆಮಾಡಬಾರದು’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT