<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮೀರಿ ಹರಡುತ್ತಿರುವುದರಿಂದ ಇನ್ನೂ ಎರಡು ತಿಂಗಳು ಶಾಲೆ ಆರಂಭಿಸುವುದು ಸರಿಯಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.</p>.<p>‘ಶಾಲೆಗಳನ್ನು ಆರಂಭಿಸುವ ವಿಷಯ ದಲ್ಲಿ ಅವಸರ ಬೇಡ. ಜುಲೈನಲ್ಲಿ ಶಾಲೆ ಆರಂಭ ಎಂಬ ಸುದ್ದಿ ಕೇಳಿ ಪೋಷಕರು ಬಹಳ ಆತಂಕದಿಂದಿದ್ದಾರೆ. ಬ್ರಿಟನ್, ಫ್ರಾನ್ಸ್, ಇಟಲಿಯಲ್ಲಿ ಶಾಲೆ ಆರಂಭಿಸಿದ ಬಳಿಕ ಕೊರೊನಾ ಸೋಂಕು ತಗುಲಿ ರುವುದು ವರದಿಯಾಗಿದೆ. ಹೀಗಾಗಿ ಎರಡು ತಿಂಗಳ ಬಳಿಕ ಪರಿಸ್ಥಿತಿ ಅಧ್ಯಯನ ಮಾಡಿ ಶಾಲೆ ಆರಂಭದ ಬಗ್ಗೆ ಯೋಜನೆ ರೂಪಿಸಬಹುದು’ ಎಂದು ಅವರು ಗುರುವಾರ ಟ್ವೀಟ್ ಮಾಡಿದ್ದಾರೆ.</p>.<p><strong>ಮರಳಿ ಕಾಂಗ್ರೆಸ್ಗೆ, ಸಮಿತಿ ರಚನೆ:</strong> ಕಾಂಗ್ರೆಸ್ ಪಕ್ಷ ಮತ್ತೆ ಸೇರಲು ಬಯಸುವವರು ಹಾಗೂ ಇತರ ಪಕ್ಷಗಳಿಂದ ಬರುವ ಮುಖಂಡರ ಅಭಿಪ್ರಾಯ ಪಡೆದು ಕೆಪಿಸಿಸಿಗೆ ವರದಿ ಮಾಡುವುದಕ್ಕಾಗಿ ಅಲ್ಲಂ ವೀರಭದ್ರಪ್ಪ ಅಧ್ಯಕ್ಷತೆಯ ಸಮಿತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮೀರಿ ಹರಡುತ್ತಿರುವುದರಿಂದ ಇನ್ನೂ ಎರಡು ತಿಂಗಳು ಶಾಲೆ ಆರಂಭಿಸುವುದು ಸರಿಯಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.</p>.<p>‘ಶಾಲೆಗಳನ್ನು ಆರಂಭಿಸುವ ವಿಷಯ ದಲ್ಲಿ ಅವಸರ ಬೇಡ. ಜುಲೈನಲ್ಲಿ ಶಾಲೆ ಆರಂಭ ಎಂಬ ಸುದ್ದಿ ಕೇಳಿ ಪೋಷಕರು ಬಹಳ ಆತಂಕದಿಂದಿದ್ದಾರೆ. ಬ್ರಿಟನ್, ಫ್ರಾನ್ಸ್, ಇಟಲಿಯಲ್ಲಿ ಶಾಲೆ ಆರಂಭಿಸಿದ ಬಳಿಕ ಕೊರೊನಾ ಸೋಂಕು ತಗುಲಿ ರುವುದು ವರದಿಯಾಗಿದೆ. ಹೀಗಾಗಿ ಎರಡು ತಿಂಗಳ ಬಳಿಕ ಪರಿಸ್ಥಿತಿ ಅಧ್ಯಯನ ಮಾಡಿ ಶಾಲೆ ಆರಂಭದ ಬಗ್ಗೆ ಯೋಜನೆ ರೂಪಿಸಬಹುದು’ ಎಂದು ಅವರು ಗುರುವಾರ ಟ್ವೀಟ್ ಮಾಡಿದ್ದಾರೆ.</p>.<p><strong>ಮರಳಿ ಕಾಂಗ್ರೆಸ್ಗೆ, ಸಮಿತಿ ರಚನೆ:</strong> ಕಾಂಗ್ರೆಸ್ ಪಕ್ಷ ಮತ್ತೆ ಸೇರಲು ಬಯಸುವವರು ಹಾಗೂ ಇತರ ಪಕ್ಷಗಳಿಂದ ಬರುವ ಮುಖಂಡರ ಅಭಿಪ್ರಾಯ ಪಡೆದು ಕೆಪಿಸಿಸಿಗೆ ವರದಿ ಮಾಡುವುದಕ್ಕಾಗಿ ಅಲ್ಲಂ ವೀರಭದ್ರಪ್ಪ ಅಧ್ಯಕ್ಷತೆಯ ಸಮಿತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>