‘ಸೊಳ್ಳೆಗಳ ಕಡಿತದಿಂದ ಹರಡುವ ಡೆಂಗಿ, ಚಿಕೂನ್ಗುನ್ಯಾದಂತಹ ಕಾಯಿಲೆ ಹೆಚ್ಚಳಕ್ಕೆ ಜಾಗೃತಿ ಕೊರತೆ ಪ್ರಮುಖ ಕಾರಣ. ಆದ್ದರಿಂದ ಸಾರ್ವಜನಿಕ ಪ್ರದೇಶಗಳಲ್ಲಿ ಎಲ್ಇಡಿ ಪರದೆ ಇರಿಸಿ, ಪ್ರಾದೇಶಿಕ ಭಾಷೆಗಳಲ್ಲಿ ಆರೋಗ್ಯ ಸಂಬಂಧಿ ಜಾಗೃತಿ ವಿಡಿಯೊಗಳನ್ನು ಪ್ರಸಾರ ಮಾಡಲಾಗುತ್ತದೆ. ಮೊಬೈಲ್ ಕ್ಲಿನಿಕ್ಗಳ ನೆರವಿನಿಂದ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಲಾಗುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಅಧ್ಯಯನ ಕೈಗೊಳ್ಳಲು ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗುತ್ತದೆ. ಪ್ರತಿ ರೋಗಿಯ ಆರೋಗ್ಯದ ಪ್ರೊಫೈಲ್ ಸಿದ್ಧಪಡಿಸಲಾಗುತ್ತದೆ’ ಎಂದು ಪ್ರತಿಷ್ಠಾನದ ಮುಖ್ಯಸ್ಥೆ ಡಾ. ಸ್ವಪ್ನಾ ಸಿಂಗ್ ತಿಳಿಸಿದರು.