<p><strong>ಬೆಂಗಳೂರು:</strong> ‘ಮನೆ ಮನೆಗೆ ಪೊಲೀಸ್ ಎಂಬ ನೂತನ ಕಾರ್ಯಕ್ರಮವನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.</p>.<p>‘ಸಾರ್ವಜನಿಕರಿಗೆ ತೊಂದರೆಯಾದ ವೇಳೆ ಪೊಲೀಸರಿಗೆ ಕರೆ ಮಾಡಿ ತಿಳಿಸಬಹುದು. ಅವರೇ ಸ್ಥಳಕ್ಕೆ ತೆರಳಿ ಸಮಸ್ಯೆ ಆಲಿಸಲಿದ್ದಾರೆ’ ಎಂದು ಹೇಳಿದರು.</p>.<p>‘ಪೊಲೀಸರು ಶಾಲಾ– ಕಾಲೇಜುಗಳಿಗೆ ಭೇಟಿ ನೀಡಬೇಕು. ಪೋಷಕರ ಸಭೆಗಳಲ್ಲೂ ಪೊಲೀಸರು ಭಾಗವಹಿಸಬೇಕು’ ಎಂದು ಸೂಚನೆ ನೀಡಿದರು</p>.<p>‘ಮಂಡ್ಯದ ಮದ್ದೂರಿನಲ್ಲಿ ಮಗು ಸಾವಿಗೀಡಾದ ದುರ್ಘಟನೆಯು ದುರದೃಷ್ಟಕರ. ಈ ಘಟನೆಯಿಂದ ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿದೆ. ಸಾರ್ವಜನಿಕರ ವಲಯದಲ್ಲಿ ಇಂತಹ ಘಟನೆಗಳು ಆಗಬಾರದು. ಇದಕ್ಕೆ ಕಾರಣರಾದ ಪೊಲೀಸರನ್ನು ಅಮಾನತು ಮಾಡಲಾಗಿದೆ. ಅವರ ವಿರುದ್ಧ ಶಿಸ್ತು ಕ್ರಮಕ್ಕೂ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.</p>.<p>‘ಪೊಲೀಸರು ಸ್ವಲ್ಪ ಮುಂಜಾಗ್ರತೆ ವಹಿಸಿದ್ದರೆ ಮದ್ದೂರಿನ ಘಟನೆಯಲ್ಲಿ ಮಗು ಸಾಯುತ್ತಿರಲಿಲ್ಲ’ ಎಂದು ಹೇಳಿದರು.</p>.<p>‘ಪೊಲೀಸರು ತಪಾಸಣೆ ವೇಳೆ ಮಾರ್ಗಸೂಚಿಗಳನ್ನು ಪಾಲಿಸಬೇಕು. ಕೆಲವು ಪೊಲೀಸರು ಮರೆಯಲ್ಲಿ ನಿಂತುಕೊಂಡಿದ್ದು ಏಕಾಏಕಿ ರಸ್ತೆಗಿಳಿದು ವಾಹನ ನಿಲುಗಡೆ ಮಾಡುತ್ತಾರೆ. ಈ ರೀತಿ ಮಾಡಬಾರದು’ ಎಂದು ಸೂಚನೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮನೆ ಮನೆಗೆ ಪೊಲೀಸ್ ಎಂಬ ನೂತನ ಕಾರ್ಯಕ್ರಮವನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.</p>.<p>‘ಸಾರ್ವಜನಿಕರಿಗೆ ತೊಂದರೆಯಾದ ವೇಳೆ ಪೊಲೀಸರಿಗೆ ಕರೆ ಮಾಡಿ ತಿಳಿಸಬಹುದು. ಅವರೇ ಸ್ಥಳಕ್ಕೆ ತೆರಳಿ ಸಮಸ್ಯೆ ಆಲಿಸಲಿದ್ದಾರೆ’ ಎಂದು ಹೇಳಿದರು.</p>.<p>‘ಪೊಲೀಸರು ಶಾಲಾ– ಕಾಲೇಜುಗಳಿಗೆ ಭೇಟಿ ನೀಡಬೇಕು. ಪೋಷಕರ ಸಭೆಗಳಲ್ಲೂ ಪೊಲೀಸರು ಭಾಗವಹಿಸಬೇಕು’ ಎಂದು ಸೂಚನೆ ನೀಡಿದರು</p>.<p>‘ಮಂಡ್ಯದ ಮದ್ದೂರಿನಲ್ಲಿ ಮಗು ಸಾವಿಗೀಡಾದ ದುರ್ಘಟನೆಯು ದುರದೃಷ್ಟಕರ. ಈ ಘಟನೆಯಿಂದ ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿದೆ. ಸಾರ್ವಜನಿಕರ ವಲಯದಲ್ಲಿ ಇಂತಹ ಘಟನೆಗಳು ಆಗಬಾರದು. ಇದಕ್ಕೆ ಕಾರಣರಾದ ಪೊಲೀಸರನ್ನು ಅಮಾನತು ಮಾಡಲಾಗಿದೆ. ಅವರ ವಿರುದ್ಧ ಶಿಸ್ತು ಕ್ರಮಕ್ಕೂ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.</p>.<p>‘ಪೊಲೀಸರು ಸ್ವಲ್ಪ ಮುಂಜಾಗ್ರತೆ ವಹಿಸಿದ್ದರೆ ಮದ್ದೂರಿನ ಘಟನೆಯಲ್ಲಿ ಮಗು ಸಾಯುತ್ತಿರಲಿಲ್ಲ’ ಎಂದು ಹೇಳಿದರು.</p>.<p>‘ಪೊಲೀಸರು ತಪಾಸಣೆ ವೇಳೆ ಮಾರ್ಗಸೂಚಿಗಳನ್ನು ಪಾಲಿಸಬೇಕು. ಕೆಲವು ಪೊಲೀಸರು ಮರೆಯಲ್ಲಿ ನಿಂತುಕೊಂಡಿದ್ದು ಏಕಾಏಕಿ ರಸ್ತೆಗಿಳಿದು ವಾಹನ ನಿಲುಗಡೆ ಮಾಡುತ್ತಾರೆ. ಈ ರೀತಿ ಮಾಡಬಾರದು’ ಎಂದು ಸೂಚನೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>