<p><strong>ಪೀಣ್ಯ ದಾಸರಹಳ್ಳಿ:</strong> ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಸೋಲದೇವನಹಳ್ಳಿಯ ಪೊಲೀಸ್ ಅಧಿಕಾರಿಗಳು ಠಾಣಾ ವ್ಯಾಪ್ತಿಯ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು.</p>.<p>ಇನ್ಸ್ಟೆಕ್ಟರ್ ಕೆ.ಕೆ.ರಘು ಮತ್ತು ಪೊಲೀಸ್ ಅಧಿಕಾರಿಗಳ ತಂಡದವರು ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿ, ಗಣಪತಿ ನಗರ ಮತ್ತು ಆತ್ಮೀಯ ಗೆಳೆಯರ ಬಳಗದವರು ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ ಮಾಹಿತಿಗಳನ್ನು ಪೊಲೀಸರ ಬಳಿ ಹಂಚಿಕೊಳ್ಳಬಹುದು’ ಎಂದು ನಿವಾಸಿಗಳಿಗೆ ವಿವರಿಸಿದರು.</p>.<p>‘ಜನರೊಂದಿಗೆ ಸಮನ್ವಯ ಸಾಧಿಸಲು ಉತ್ತಮ ಕಾರ್ಯಕ್ರಮವಾಗಿದೆ. ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ಅಭಿಪ್ರಾಯವನ್ನು ಉತ್ತಮಗೊಳಿಸಲು ಈ ಕಾರ್ಯಕ್ರಮ ಅನುಕೂಲವಾಗಿದೆ’ ಎಂದು ಮಾಧ್ಯಮದವರಿಗೆ ತಿಳಿಸಿದರು. ‘ಜನ ಸಾಮಾನ್ಯರು ಕಷ್ಟದ ಸಮಯದಲ್ಲಿ ಬಳಸಬಹುದಾದ ತುರ್ತು ಕರೆಗಳ ಬಗ್ಗೆ ನಿವಾಸಿಗಳಿಗೆ ಮಾಹಿತಿ ನೀಡಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಸೋಲದೇವನಹಳ್ಳಿಯ ಪೊಲೀಸ್ ಅಧಿಕಾರಿಗಳು ಠಾಣಾ ವ್ಯಾಪ್ತಿಯ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು.</p>.<p>ಇನ್ಸ್ಟೆಕ್ಟರ್ ಕೆ.ಕೆ.ರಘು ಮತ್ತು ಪೊಲೀಸ್ ಅಧಿಕಾರಿಗಳ ತಂಡದವರು ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿ, ಗಣಪತಿ ನಗರ ಮತ್ತು ಆತ್ಮೀಯ ಗೆಳೆಯರ ಬಳಗದವರು ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ ಮಾಹಿತಿಗಳನ್ನು ಪೊಲೀಸರ ಬಳಿ ಹಂಚಿಕೊಳ್ಳಬಹುದು’ ಎಂದು ನಿವಾಸಿಗಳಿಗೆ ವಿವರಿಸಿದರು.</p>.<p>‘ಜನರೊಂದಿಗೆ ಸಮನ್ವಯ ಸಾಧಿಸಲು ಉತ್ತಮ ಕಾರ್ಯಕ್ರಮವಾಗಿದೆ. ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ಅಭಿಪ್ರಾಯವನ್ನು ಉತ್ತಮಗೊಳಿಸಲು ಈ ಕಾರ್ಯಕ್ರಮ ಅನುಕೂಲವಾಗಿದೆ’ ಎಂದು ಮಾಧ್ಯಮದವರಿಗೆ ತಿಳಿಸಿದರು. ‘ಜನ ಸಾಮಾನ್ಯರು ಕಷ್ಟದ ಸಮಯದಲ್ಲಿ ಬಳಸಬಹುದಾದ ತುರ್ತು ಕರೆಗಳ ಬಗ್ಗೆ ನಿವಾಸಿಗಳಿಗೆ ಮಾಹಿತಿ ನೀಡಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>