ಸಮೀಪದ ಸೀಬಾರದಲ್ಲಿ ಎಸ್.ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪಕ್ಷ ಬದಲಿಸುವ ಶಾಸಕರಿಗೆ ಸರ್ಕಾರದ ಬಗ್ಗೆ, ಜನರ ಬಗ್ಗೆ ಕಾಳಜಿ ಇಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ನಿಷ್ಠೆಯನ್ನೂ ಹೊಂದಿಲ್ಲ. ತ್ಯಾಗ, ಬಲಿದಾನಗಳ ಮೂಲಕ ಗಳಿಸಿದ ಸ್ವಾತಂತ್ರ್ಯದ ಬಗ್ಗೆ ಗೌರವ ಕೂಡ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.