ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಪ್ಪಟ್ಟು ಲಾಭದ ಆಮಿಷ ₹ 24.45 ಲಕ್ಷ ವಂಚನೆ

Last Updated 16 ಅಕ್ಟೋಬರ್ 2021, 19:52 IST
ಅಕ್ಷರ ಗಾತ್ರ

ಬೆಂಗಳೂರು: ದುಪ್ಪಟ್ಟು ಲಾಭದ ಆಮಿಷವೊಡ್ಡಿ ₹ 24.45 ಲಕ್ಷ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಕುರಿತು ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಹಾಲಕ್ಷ್ಮಿಪುರ ನಿವಾಸಿಯಾಗಿರುವ 27 ವರ್ಷದ ಯುವಕ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶದ ಸಮೇತ ಲಿಂಕ್ ಬಂದಿತ್ತು. ‘ಈ ಲಿಂಕ್‌ ಕ್ಲಿಕ್ ಮಾಡಿ ₹ 100 ಹೂಡಿಕೆ ಮಾಡಿದರೆ, ₹ 150 ಲಾಭ ಬರುತ್ತದೆ’ ಎಂಬುದಾಗಿ ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶ ನಂಬಿದ್ದ ದೂರುದಾರ, ಹಂತ ಹಂತವಾಗಿ ₹ 21.45 ಲಕ್ಷ ಹೂಡಿಕೆ ಮಾಡಿದ್ದರು.’

‘ನಿಗದಿತ ದಿನದೊಳಗೆ ಲಾಭದ ಹಣ ಹಾಗೂ ಅಸಲು ವಾಪಸು ಬಂದಿರಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ಪ್ರತಿಕ್ರಿಯೆ ಸಿಕ್ಕಿರ
ಲಿಲ್ಲ. ನೊಂದ ಯುವಕ, ಠಾಣೆಗೆ ದೂರು ನೀಡಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT