<p><strong>ಬೆಂಗಳೂರು</strong>: ವರದಕ್ಷಿಣೆ ತರುವಂತೆ ಪೀಡಿಸಿ ಪತ್ನಿಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಆರೋಪದಡಿ ರಾಘವೇಂದ್ರ ಚನ್ನಣ್ಣನವರ ಹಾಗೂ ಇತರರ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ನಿವಾಸಿ ರೋಜಾ (26) ಇತ್ತೀಚೆಗೆ ದೂರು ನೀಡಿದ್ದಾರೆ. ಆರೋಪಿಗಳಾದ ರಾಘವೇಂದ್ರ ಚನ್ನಣ್ಣನವರ ಹಾಗೂ ಅವರ ಸಂಬಂಧಿ ಹನುಮಂತ ತಿಮ್ಮಾಪುರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>'ವರದಕ್ಷಿಣೆ ಕಿರುಕುಳ (ಐಪಿಸಿ 498ಎ) ಹಾಗೂ ಜೀವ ಬೆದರಿಕೆ (ಐಪಿಸಿ 506) ಆರೋಪದಡಿ ಎಫ್ಐಆರ್ ದಾಖಲಾಗಿದೆ. ಕೃತ್ಯ ನಡೆದ ಸ್ಥಳದ ಆಧಾರದಲ್ಲಿ ಪ್ರಕರಣವನ್ನು ಗದಗ ಜಿಲ್ಲೆಯ ಮುಳಗುಂದ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿಯ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಲಿದ್ದಾರೆ’ ಎಂದೂ ಹೇಳಿದರು.</p>.<p>ದೂರಿನ ವಿವರ: ‘ರವಿ ಚನ್ನಣ್ಣನವರ ಅವರು 2015ರಲ್ಲಿ ಶಿವಮೊಗ್ಗ ಜಿಲ್ಲೆ ಎಸ್ಪಿ ಆಗಿದ್ದರು. ಅದೇ ವೇಳೆ ನನ್ನ ತಂದೆಗೆ ಪರಿಚಯವಾಗಿದ್ದರು. ತಮ್ಮನಿಗೆ ಹುಡುಗಿ ಹುಡುಕುತ್ತಿರುವುದಾಗಿ ಹೇಳಿದ್ದರು. ಅದನ್ನು ತಿಳಿದ ತಂದೆ, ತನ್ನನ್ನೇ ತೋರಿಸಿದ್ದರು. ಎರಡೂ ಕುಟುಂಬಕ್ಕೆ ಒಪ್ಪಿಗೆ ಆಗಿ, 2016ರ ಆಗಸ್ಟ್ 27ರಂದು ಶಿವಮೊಗ್ಗದ ಎ.ಎ.ಎಸ್ ಸಮುದಾಯ ಭವನದಲ್ಲಿ ಮದುವೆಯಾಯಿತು. ಸಾಕಷ್ಟು ವರದಕ್ಷಿಣೆಯನ್ನೂ ನೀಡಲಾಯಿತು’ ಎಂದು ದೂರಿನಲ್ಲಿ ರೋಜಾ ತಿಳಿಸಿದ್ದಾರೆ.</p>.<p>‘ಮದುವೆ ಬಳಿಕ ಗದಗ ಜಿಲ್ಲೆಯ ನೀಲಗುಂದದಲ್ಲಿರುವ ಪತಿ ರಾಘವೇಂದ್ರ ಮನೆಯಲ್ಲಿ ವಾಸವಿದ್ದೆ. ಆದರೆ, ಪತಿ ಬೇರೊಬ್ಬರ ಯುವತಿ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಗಲಾಟೆ ಆಯಿತು. ಅಂದಿನಿಂದ ಪತಿ, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾರಂಭಿಸಿದರು. ತವರು ಮನೆಗೆ ಹೋಗಿ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದರು. ಈ ಸಂಗತಿಯನ್ನು ರವಿ ಚನ್ನಣ್ಣನವರಿಗೂ ತಿಳಿಸಿದೆ. ಅವರೂ ಹೊಂದಾಣಿಕೆ ಮಾಡಿಕೊಂಡು ಹೋಗುವಂತೆ ಹೇಳಿದರು. ಇದರ ನಡುವೆಯೇ ಹನುಮಂತ ತಿಮ್ಮಾಪುರ ನನಗೆ ಜೀವ ಬೆದರಿಕೆ ಹಾಕಿದ್ದಾರೆ’ ಎಂದೂ ದೂರಿದ್ದಾರೆ.</p>.<p><a href="https://www.prajavani.net/district/uthara-kannada/student-from-remote-village-become-top-scorer-in-sslc-exmas-938152.html" itemprop="url">SSLC Results: ಭೂ ಕುಸಿತದಿಂದ ಕಂಗೆಡದ ದಿಟ್ಟೆ- ರಾಜ್ಯಕ್ಕೇ 6ನೇ ಸ್ಥಾನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವರದಕ್ಷಿಣೆ ತರುವಂತೆ ಪೀಡಿಸಿ ಪತ್ನಿಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಆರೋಪದಡಿ ರಾಘವೇಂದ್ರ ಚನ್ನಣ್ಣನವರ ಹಾಗೂ ಇತರರ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ನಿವಾಸಿ ರೋಜಾ (26) ಇತ್ತೀಚೆಗೆ ದೂರು ನೀಡಿದ್ದಾರೆ. ಆರೋಪಿಗಳಾದ ರಾಘವೇಂದ್ರ ಚನ್ನಣ್ಣನವರ ಹಾಗೂ ಅವರ ಸಂಬಂಧಿ ಹನುಮಂತ ತಿಮ್ಮಾಪುರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>'ವರದಕ್ಷಿಣೆ ಕಿರುಕುಳ (ಐಪಿಸಿ 498ಎ) ಹಾಗೂ ಜೀವ ಬೆದರಿಕೆ (ಐಪಿಸಿ 506) ಆರೋಪದಡಿ ಎಫ್ಐಆರ್ ದಾಖಲಾಗಿದೆ. ಕೃತ್ಯ ನಡೆದ ಸ್ಥಳದ ಆಧಾರದಲ್ಲಿ ಪ್ರಕರಣವನ್ನು ಗದಗ ಜಿಲ್ಲೆಯ ಮುಳಗುಂದ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿಯ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಲಿದ್ದಾರೆ’ ಎಂದೂ ಹೇಳಿದರು.</p>.<p>ದೂರಿನ ವಿವರ: ‘ರವಿ ಚನ್ನಣ್ಣನವರ ಅವರು 2015ರಲ್ಲಿ ಶಿವಮೊಗ್ಗ ಜಿಲ್ಲೆ ಎಸ್ಪಿ ಆಗಿದ್ದರು. ಅದೇ ವೇಳೆ ನನ್ನ ತಂದೆಗೆ ಪರಿಚಯವಾಗಿದ್ದರು. ತಮ್ಮನಿಗೆ ಹುಡುಗಿ ಹುಡುಕುತ್ತಿರುವುದಾಗಿ ಹೇಳಿದ್ದರು. ಅದನ್ನು ತಿಳಿದ ತಂದೆ, ತನ್ನನ್ನೇ ತೋರಿಸಿದ್ದರು. ಎರಡೂ ಕುಟುಂಬಕ್ಕೆ ಒಪ್ಪಿಗೆ ಆಗಿ, 2016ರ ಆಗಸ್ಟ್ 27ರಂದು ಶಿವಮೊಗ್ಗದ ಎ.ಎ.ಎಸ್ ಸಮುದಾಯ ಭವನದಲ್ಲಿ ಮದುವೆಯಾಯಿತು. ಸಾಕಷ್ಟು ವರದಕ್ಷಿಣೆಯನ್ನೂ ನೀಡಲಾಯಿತು’ ಎಂದು ದೂರಿನಲ್ಲಿ ರೋಜಾ ತಿಳಿಸಿದ್ದಾರೆ.</p>.<p>‘ಮದುವೆ ಬಳಿಕ ಗದಗ ಜಿಲ್ಲೆಯ ನೀಲಗುಂದದಲ್ಲಿರುವ ಪತಿ ರಾಘವೇಂದ್ರ ಮನೆಯಲ್ಲಿ ವಾಸವಿದ್ದೆ. ಆದರೆ, ಪತಿ ಬೇರೊಬ್ಬರ ಯುವತಿ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಗಲಾಟೆ ಆಯಿತು. ಅಂದಿನಿಂದ ಪತಿ, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾರಂಭಿಸಿದರು. ತವರು ಮನೆಗೆ ಹೋಗಿ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದರು. ಈ ಸಂಗತಿಯನ್ನು ರವಿ ಚನ್ನಣ್ಣನವರಿಗೂ ತಿಳಿಸಿದೆ. ಅವರೂ ಹೊಂದಾಣಿಕೆ ಮಾಡಿಕೊಂಡು ಹೋಗುವಂತೆ ಹೇಳಿದರು. ಇದರ ನಡುವೆಯೇ ಹನುಮಂತ ತಿಮ್ಮಾಪುರ ನನಗೆ ಜೀವ ಬೆದರಿಕೆ ಹಾಕಿದ್ದಾರೆ’ ಎಂದೂ ದೂರಿದ್ದಾರೆ.</p>.<p><a href="https://www.prajavani.net/district/uthara-kannada/student-from-remote-village-become-top-scorer-in-sslc-exmas-938152.html" itemprop="url">SSLC Results: ಭೂ ಕುಸಿತದಿಂದ ಕಂಗೆಡದ ದಿಟ್ಟೆ- ರಾಜ್ಯಕ್ಕೇ 6ನೇ ಸ್ಥಾನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>