<p><strong>ಬೆಂಗಳೂರು:</strong> ವರದಕ್ಷಿಣೆ ವಿಚಾರವಾಗಿ ದಂಪತಿ ನಡುವೆ ಜಗಳವಾಗಿ ಪತ್ನಿಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಪತಿಯನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಪತ್ನಿ ನಮಿತಾ ಸಾಹು (43) ಕೊಲೆಯಾದವರು. ಲೋಕೇಶ್ ಕುಮಾರ್ ಗೆಹಲೋತ್ (43) ಬಂಧಿತ ಆರೋಪಿ.</p>.<p>ಏಪ್ರಿಲ್ 24ರಂದು ಠಾಣಾ ವ್ಯಾಪ್ತಿಯ ಮಹಾಗಣಪತಿ ನಗರದ ಮನೆಯಲ್ಲಿ ನಮಿತಾ ಸಾಹು ಅವರನ್ನು ಕೊಲೆ ಮಾಡಲಾಗಿತ್ತು. ಮನೆ ಮಾಲೀಕ ಭೂಪೇಂದರ್ ಅವರು ನೀಡಿದ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.</p>.<p>ಕಬ್ಬನ್ ಪೇಟೆಯಲ್ಲಿ ಫೊಟೊ ಸ್ಟುಡಿಯೊ ಹೊಂದಿದ್ದ ರಾಜಸ್ಥಾನದ ಲೋಕೇಶ್ ಕುಮಾರ್, <br />ಐದು ವರ್ಷಗಳ ಹಿಂದೆ ನಮಿತಾ ಸಾಹು ಅವರನ್ನು ವಿವಾಹವಾಗಿ ಮಹಾಗಣಪತಿ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ಇತ್ತೀಚೆಗೆ ದಂಪತಿ ನಡುವೆ ಸಣ್ಣಪುಟ್ಟ ವಿಚಾರಗಳಿಗೆ ಗಲಾಟೆಯಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಏಪ್ರಿಲ್ 24ರಂದು ಮನೆಯಲ್ಲಿದ್ದ ಲೋಕೇಶ್ಗೆ, ಪತ್ನಿಯ ಸಹೋದರ ಕರೆ ಮಾಡಿದ್ದರು. ಈ ವೇಳೆ ಫೋನ್ ಸ್ಪೀಕರ್ ಆನ್ ಮಾಡುವಂತೆ ನಮಿತಾ ಒತ್ತಾಯಿಸಿದ್ದರು. ಆನ್ ಮಾಡಲು ನಿರಾಕರಿಸಿದಾಗ ಇಬ್ಬರ ಮಧ್ಯೆ ಗಲಾಟೆಯಾಗಿತ್ತು. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>‘ಮದುವೆಗೂ ಮುನ್ನ ಪತ್ನಿ ಕೆಲಸ ಮಾಡುತ್ತಿದ್ದಾಗ ಕೂಡಿಟ್ಟ ಹಣ ಕೊಡುವಂತೆ ಆರೋಪಿ ಪೀಡಿಸುತ್ತಿದ್ದ. ಸ್ಟುಡಿಯೊ ಅಭಿವೃದ್ಧಿಪಡಿಸಲು ಮತ್ತು ನಗರದಲ್ಲಿ ನಿವೇಶನ ಖರೀದಿಸಲು ಹಣ ನೀಡುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಆಕೆಯಿಂದ ₹ 60 ಸಾವಿರ ಪಡೆದುಕೊಂಡಿದ್ದ ಮತ್ತು ತವರು ಮನೆಯಿಂದ ವರದಕ್ಷಿಣೆ ತರುವಂತೆ ಒತ್ತಾಯ ಮಾಡುತ್ತಿದ್ದ’ ಎಂದು ನಮಿತಾ ಸಾಹು ಕುಟುಂಬಸ್ಥರು ಆರೋಪಿಸಿದ್ದಾರೆ.</p>.<p>ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಮಾತನಾಡಿ, ‘ಬಸವೇಶ್ವರನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ ಮಧ್ಯೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಏಪ್ರಿಲ್ 24ರ ಸಂಜೆ ಕೆಲಸದಿಂದ ಮನೆಗೆ ಬಂದ ಲೋಕೇಶ್, ತನ್ನ ಪತ್ನಿಯ ಅಣ್ಣನೊಂದಿಗೆ ಮಾತನಾಡುತ್ತಿದ್ದ. ಈ ವೇಳೆ ತಾನೂ ಕೇಳಿಸಿಕೊಳ್ಳಬೇಕೆಂದು ಲೌಡ್ ಸ್ಪೀಕರ್ ಹಾಕುವಂತೆ ಪತ್ನಿಯು ಒತ್ತಾಯಿಸಿದ್ದಾರೆ. ಆದರೆ, ಇದಕ್ಕೆ ಆತ ಒಪ್ಪಿಲ್ಲ. ಕೋಪದಲ್ಲಿ ಪತ್ನಿಗೆ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿರುವುದು ಗೊತ್ತಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವರದಕ್ಷಿಣೆ ವಿಚಾರವಾಗಿ ದಂಪತಿ ನಡುವೆ ಜಗಳವಾಗಿ ಪತ್ನಿಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಪತಿಯನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಪತ್ನಿ ನಮಿತಾ ಸಾಹು (43) ಕೊಲೆಯಾದವರು. ಲೋಕೇಶ್ ಕುಮಾರ್ ಗೆಹಲೋತ್ (43) ಬಂಧಿತ ಆರೋಪಿ.</p>.<p>ಏಪ್ರಿಲ್ 24ರಂದು ಠಾಣಾ ವ್ಯಾಪ್ತಿಯ ಮಹಾಗಣಪತಿ ನಗರದ ಮನೆಯಲ್ಲಿ ನಮಿತಾ ಸಾಹು ಅವರನ್ನು ಕೊಲೆ ಮಾಡಲಾಗಿತ್ತು. ಮನೆ ಮಾಲೀಕ ಭೂಪೇಂದರ್ ಅವರು ನೀಡಿದ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.</p>.<p>ಕಬ್ಬನ್ ಪೇಟೆಯಲ್ಲಿ ಫೊಟೊ ಸ್ಟುಡಿಯೊ ಹೊಂದಿದ್ದ ರಾಜಸ್ಥಾನದ ಲೋಕೇಶ್ ಕುಮಾರ್, <br />ಐದು ವರ್ಷಗಳ ಹಿಂದೆ ನಮಿತಾ ಸಾಹು ಅವರನ್ನು ವಿವಾಹವಾಗಿ ಮಹಾಗಣಪತಿ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ಇತ್ತೀಚೆಗೆ ದಂಪತಿ ನಡುವೆ ಸಣ್ಣಪುಟ್ಟ ವಿಚಾರಗಳಿಗೆ ಗಲಾಟೆಯಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಏಪ್ರಿಲ್ 24ರಂದು ಮನೆಯಲ್ಲಿದ್ದ ಲೋಕೇಶ್ಗೆ, ಪತ್ನಿಯ ಸಹೋದರ ಕರೆ ಮಾಡಿದ್ದರು. ಈ ವೇಳೆ ಫೋನ್ ಸ್ಪೀಕರ್ ಆನ್ ಮಾಡುವಂತೆ ನಮಿತಾ ಒತ್ತಾಯಿಸಿದ್ದರು. ಆನ್ ಮಾಡಲು ನಿರಾಕರಿಸಿದಾಗ ಇಬ್ಬರ ಮಧ್ಯೆ ಗಲಾಟೆಯಾಗಿತ್ತು. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>‘ಮದುವೆಗೂ ಮುನ್ನ ಪತ್ನಿ ಕೆಲಸ ಮಾಡುತ್ತಿದ್ದಾಗ ಕೂಡಿಟ್ಟ ಹಣ ಕೊಡುವಂತೆ ಆರೋಪಿ ಪೀಡಿಸುತ್ತಿದ್ದ. ಸ್ಟುಡಿಯೊ ಅಭಿವೃದ್ಧಿಪಡಿಸಲು ಮತ್ತು ನಗರದಲ್ಲಿ ನಿವೇಶನ ಖರೀದಿಸಲು ಹಣ ನೀಡುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಆಕೆಯಿಂದ ₹ 60 ಸಾವಿರ ಪಡೆದುಕೊಂಡಿದ್ದ ಮತ್ತು ತವರು ಮನೆಯಿಂದ ವರದಕ್ಷಿಣೆ ತರುವಂತೆ ಒತ್ತಾಯ ಮಾಡುತ್ತಿದ್ದ’ ಎಂದು ನಮಿತಾ ಸಾಹು ಕುಟುಂಬಸ್ಥರು ಆರೋಪಿಸಿದ್ದಾರೆ.</p>.<p>ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಮಾತನಾಡಿ, ‘ಬಸವೇಶ್ವರನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ ಮಧ್ಯೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಏಪ್ರಿಲ್ 24ರ ಸಂಜೆ ಕೆಲಸದಿಂದ ಮನೆಗೆ ಬಂದ ಲೋಕೇಶ್, ತನ್ನ ಪತ್ನಿಯ ಅಣ್ಣನೊಂದಿಗೆ ಮಾತನಾಡುತ್ತಿದ್ದ. ಈ ವೇಳೆ ತಾನೂ ಕೇಳಿಸಿಕೊಳ್ಳಬೇಕೆಂದು ಲೌಡ್ ಸ್ಪೀಕರ್ ಹಾಕುವಂತೆ ಪತ್ನಿಯು ಒತ್ತಾಯಿಸಿದ್ದಾರೆ. ಆದರೆ, ಇದಕ್ಕೆ ಆತ ಒಪ್ಪಿಲ್ಲ. ಕೋಪದಲ್ಲಿ ಪತ್ನಿಗೆ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿರುವುದು ಗೊತ್ತಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>