ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುಧ ಪೂಜೆ ವೇಳೆ ವಿಧಾನಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಸದಂತೆ ಸೂಚನೆ

Published 18 ಅಕ್ಟೋಬರ್ 2023, 20:13 IST
Last Updated 18 ಅಕ್ಟೋಬರ್ 2023, 20:13 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆಯಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.

ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿವೆ. ಈ ಕಟ್ಟಡಗಳಲ್ಲಿ ಆಯುಧ ಪೂಜೆ ಮಾಡುವಾಗ ಕುಂಬಳಕಾಯಿ ಮತ್ತು ರಂಗೋಲಿಗಳಲ್ಲಿ ರಾಸಾಯನಿಕ ಮಿಶ್ರಿತವಾದ ಬಣ್ಣ, ಅರಿಶಿನ, ಕುಂಕುಮ ಮತ್ತು ಸುಣ್ಣವನ್ನು ಬಳಸಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪಾರಂಪರಿಕ ಕಟ್ಟಡಗಳ ಸೌಂದರ್ಯ ರಕ್ಷಿಸುವುದು ಅಧಿಕಾರಿಗಳು ಮತ್ತು ನೌಕರರ ಕರ್ತವ್ಯ. ಈ ವಿಚಾರದಲ್ಲಿ ಸ್ಪಂದಿಸದೇ ಇದ್ದರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ನೌಕರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದೂ ಎಚ್ಚರಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT