<p><strong>ಬೆಂಗಳೂರು</strong>: ‘ಭಾರತ ಜಾತ್ಯತೀತ ರಾಷ್ಟ್ರವಾಗಿದ್ದರೂ ಜಾತಿ ಎಂಬ ಮನೋಭಾವ ಜನರ ಮನಸ್ಸಿನಲ್ಲಿ ಬೇರೂರಿದೆ. ಜಾತಿ ವ್ಯವಸ್ಥೆ ಇಂದಿಗೂ ಅಸ್ತಿತ್ವದಲ್ಲಿದೆ. ಅಂಬೇಡ್ಕರ್ ಆಶಯದಂತೆ ಸಮಾಜವು ಈ ಎಲ್ಲದರಿಂದ ಮುಕ್ತವಾಗಿ ಸಮಸಮಾಜ ನಿರ್ಮಾಣವಾಗಬೇಕು’ ಎಂದು ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯಪಟ್ಟರು. </p>.<p>ವಿಶ್ವಜ್ಞಾನಿ ಜನ ಜಾಗೃತಿ ವೇದಿಕೆ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಎಸ್ಸಿ/ಎಸ್ಟಿ ಬೋಧಕೇತರ ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂಬೇಡ್ಕರ್ ಅವರು ಶೋಷಣೆಗೆ ಒಳಗಾದ ಸಮುದಾಯವನ್ನು ಮುನ್ನಲೆಗೆ ತರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ನಿರೂಪಿಸಿದರು. ದೇಶದಲ್ಲಿ ಶೇ 74ರಷ್ಟು ಸಾಕ್ಷರತೆ ಪ್ರಮಾಣ ಇದೆ. ಇನ್ನೂ ಕೆಲವು ವರ್ಗ, ಸಮುದಾಯಗಳು ಶಿಕ್ಷಣದಿಂದ ವಂಚಿತವಾಗಿವೆ, ಅವರನ್ನು ಶಿಕ್ಷಿತರನ್ನಾಗಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಎಂ. ಎಸ್. ಜಯಕರ, ‘ಅಂಬೇಡ್ಕರ್, ಸಂವಿಧಾನದ ಮೂಲಕ ಸಮಾನತೆಯನ್ನು ಜಾರಿಗೆ ತಂದರು. ನಮ್ಮ ವಿಶ್ವವಿದ್ಯಾಲಯವು ಅಂಬೇಡ್ಕರ್ ಆಶಯ ಈಡೇರಿಸಲು ಶ್ರಮಿಸುತ್ತದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ನವೀನ್ ಕುಮಾರ್, ಸಿಂಡಿಕೇಟ್ ಸದಸ್ಯ ರಮೇಶ್ ಬಾಬು, ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಪಾಲಕ ಪ್ರೊ.ರಘುನಂದನ, ವಿಶ್ವವಿದ್ಯಾಲಯದ ಎಸ್ಸಿ/ಎಸ್ಟಿ ಬೋಧಕೇತರರ ಸಂಘದ ಅಧ್ಯಕ್ಷ ಶಿವಪ್ಪ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಭಾರತ ಜಾತ್ಯತೀತ ರಾಷ್ಟ್ರವಾಗಿದ್ದರೂ ಜಾತಿ ಎಂಬ ಮನೋಭಾವ ಜನರ ಮನಸ್ಸಿನಲ್ಲಿ ಬೇರೂರಿದೆ. ಜಾತಿ ವ್ಯವಸ್ಥೆ ಇಂದಿಗೂ ಅಸ್ತಿತ್ವದಲ್ಲಿದೆ. ಅಂಬೇಡ್ಕರ್ ಆಶಯದಂತೆ ಸಮಾಜವು ಈ ಎಲ್ಲದರಿಂದ ಮುಕ್ತವಾಗಿ ಸಮಸಮಾಜ ನಿರ್ಮಾಣವಾಗಬೇಕು’ ಎಂದು ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯಪಟ್ಟರು. </p>.<p>ವಿಶ್ವಜ್ಞಾನಿ ಜನ ಜಾಗೃತಿ ವೇದಿಕೆ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಎಸ್ಸಿ/ಎಸ್ಟಿ ಬೋಧಕೇತರ ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂಬೇಡ್ಕರ್ ಅವರು ಶೋಷಣೆಗೆ ಒಳಗಾದ ಸಮುದಾಯವನ್ನು ಮುನ್ನಲೆಗೆ ತರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ನಿರೂಪಿಸಿದರು. ದೇಶದಲ್ಲಿ ಶೇ 74ರಷ್ಟು ಸಾಕ್ಷರತೆ ಪ್ರಮಾಣ ಇದೆ. ಇನ್ನೂ ಕೆಲವು ವರ್ಗ, ಸಮುದಾಯಗಳು ಶಿಕ್ಷಣದಿಂದ ವಂಚಿತವಾಗಿವೆ, ಅವರನ್ನು ಶಿಕ್ಷಿತರನ್ನಾಗಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಎಂ. ಎಸ್. ಜಯಕರ, ‘ಅಂಬೇಡ್ಕರ್, ಸಂವಿಧಾನದ ಮೂಲಕ ಸಮಾನತೆಯನ್ನು ಜಾರಿಗೆ ತಂದರು. ನಮ್ಮ ವಿಶ್ವವಿದ್ಯಾಲಯವು ಅಂಬೇಡ್ಕರ್ ಆಶಯ ಈಡೇರಿಸಲು ಶ್ರಮಿಸುತ್ತದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ನವೀನ್ ಕುಮಾರ್, ಸಿಂಡಿಕೇಟ್ ಸದಸ್ಯ ರಮೇಶ್ ಬಾಬು, ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಪಾಲಕ ಪ್ರೊ.ರಘುನಂದನ, ವಿಶ್ವವಿದ್ಯಾಲಯದ ಎಸ್ಸಿ/ಎಸ್ಟಿ ಬೋಧಕೇತರರ ಸಂಘದ ಅಧ್ಯಕ್ಷ ಶಿವಪ್ಪ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>