<p><strong>ಬೆಂಗಳೂರು</strong>: ಅಂಗ ನಿರ್ಧರಣಾ ಸಮಿತಿಯ ಸಲಹಾ ಗುಂಪಿನಿಂದ ನೆಪ್ರೊ ಯುರಾಲಜಿ ಸಂಸ್ಥೆಯ ಪ್ರಾಧ್ಯಾಪಕ ಡಾ.ಸಿ.ಜಿ.ಶ್ರೀಧರ್ ಅವರನ್ನು ಕೈಬಿಡಲಾಗಿದೆ. </p>.<p>ಆರೋಗ್ಯ ಇಲಾಖೆ ಅಂಗ ನಿರ್ಧರಣಾ ಸಮಿತಿ ರಚಿಸಿ ಈಚೆಗೆ ಆದೇಶ ಹೊರಡಿಸಿತ್ತು. ಏಳು ಅಂಗ ಸಮಿತಿಗೆ ಸಲಹಾ ಗುಂಪು ರಚನೆ ಮಾಡಲಾಗಿತ್ತು. ಅದರಲ್ಲಿ ಮೂತ್ರ ಪಿಂಡ ಸಲಹಾ ಗುಂಪಿನಲ್ಲಿ ನೆಪ್ರೊ ಯುರಾಲಜಿ ಸಂಸ್ಥೆಯ ಪ್ರಾಧ್ಯಾಪಕ ಡಾ.ಸಿ.ಜಿ.ಶ್ರೀಧರ್ ಇದ್ದರು. </p>.<p>ನೆಪ್ರೊ ಯುರಾಲಜಿ ಸಂಸ್ಥೆಯ ಸಿ.ಜಿ.ಶ್ರೀಧರ್, ಆರ್.ಕೇಶವ ಮೂರ್ತಿ, ಪ್ರದೀಪ್, ಕಿಶನ್ ಹಾಗೂ ಶ್ರೀನಿವಾಸನ್ ವಿರುದ್ಧ ಡಾ.ಸುಜಾತಾ ಸಿದ್ದಪ್ಪ ಅವರು 2021ರಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು. ಈ ದೂರು ಆಧರಿಸಿ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿತ್ತು. ವೈದ್ಯರ ವಿರುದ್ಧ ಆರೋಪ ಸಾಬೀತಾಗಿದ್ದು, ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯನ್ನು ಅಧ್ಯಯನ ಮಾಡಿದ ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಪಿತ ವೈದ್ಯರ ವಿರುದ್ಧ ಜಂಟಿ ಇಲಾಖೆ ವಿಚಾರಣೆ ನಡೆಸಿದೆ. ಹಾಗಾಗಿ, ಶ್ರೀಧರ್ ಅವರನ್ನು ಕೈಬಿಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಂಗ ನಿರ್ಧರಣಾ ಸಮಿತಿಯ ಸಲಹಾ ಗುಂಪಿನಿಂದ ನೆಪ್ರೊ ಯುರಾಲಜಿ ಸಂಸ್ಥೆಯ ಪ್ರಾಧ್ಯಾಪಕ ಡಾ.ಸಿ.ಜಿ.ಶ್ರೀಧರ್ ಅವರನ್ನು ಕೈಬಿಡಲಾಗಿದೆ. </p>.<p>ಆರೋಗ್ಯ ಇಲಾಖೆ ಅಂಗ ನಿರ್ಧರಣಾ ಸಮಿತಿ ರಚಿಸಿ ಈಚೆಗೆ ಆದೇಶ ಹೊರಡಿಸಿತ್ತು. ಏಳು ಅಂಗ ಸಮಿತಿಗೆ ಸಲಹಾ ಗುಂಪು ರಚನೆ ಮಾಡಲಾಗಿತ್ತು. ಅದರಲ್ಲಿ ಮೂತ್ರ ಪಿಂಡ ಸಲಹಾ ಗುಂಪಿನಲ್ಲಿ ನೆಪ್ರೊ ಯುರಾಲಜಿ ಸಂಸ್ಥೆಯ ಪ್ರಾಧ್ಯಾಪಕ ಡಾ.ಸಿ.ಜಿ.ಶ್ರೀಧರ್ ಇದ್ದರು. </p>.<p>ನೆಪ್ರೊ ಯುರಾಲಜಿ ಸಂಸ್ಥೆಯ ಸಿ.ಜಿ.ಶ್ರೀಧರ್, ಆರ್.ಕೇಶವ ಮೂರ್ತಿ, ಪ್ರದೀಪ್, ಕಿಶನ್ ಹಾಗೂ ಶ್ರೀನಿವಾಸನ್ ವಿರುದ್ಧ ಡಾ.ಸುಜಾತಾ ಸಿದ್ದಪ್ಪ ಅವರು 2021ರಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು. ಈ ದೂರು ಆಧರಿಸಿ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿತ್ತು. ವೈದ್ಯರ ವಿರುದ್ಧ ಆರೋಪ ಸಾಬೀತಾಗಿದ್ದು, ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯನ್ನು ಅಧ್ಯಯನ ಮಾಡಿದ ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಪಿತ ವೈದ್ಯರ ವಿರುದ್ಧ ಜಂಟಿ ಇಲಾಖೆ ವಿಚಾರಣೆ ನಡೆಸಿದೆ. ಹಾಗಾಗಿ, ಶ್ರೀಧರ್ ಅವರನ್ನು ಕೈಬಿಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>