<p><strong>ಬೆಂಗಳೂರು:</strong> ‘ಪಶ್ಚಿಮ ಏಷ್ಯಾ ಸಂಘರ್ಷವು ರಾಸಾಯನಿಕ ಯುದ್ಧವಾಗಿ ಮಾರ್ಪಡುವ ಸಾಧ್ಯತೆಯಿದ್ದು, ಯುದ್ಧವು ಹೀಗೆಯೇ ಮುಂದುವರಿದಲ್ಲಿ ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಆರ್ಥಿಕ ವ್ಯವಸ್ಥೆ ಹಾಗೂ ಅಗತ್ಯ ವಸ್ತುಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ’ ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅಭಿಪ್ರಾಯಪಟ್ಟರು. </p>.<p>ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘವು ನಗರದಲ್ಲಿ ಹಮ್ಮಿಕೊಂಡಿದ್ದ 13ನೇ ತ್ರೈವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ‘ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಮುಂದುವರಿದಿದೆ. ಜಗತ್ತಿನ ಒಳಿತಿಗಾಗಿ ಈ ರಾಷ್ಟ್ರಗಳು ಪರಸ್ಪರ ಒಪ್ಪಂದದ ಮೂಲಕ ಯುದ್ಧವನ್ನು ನಿಲ್ಲಿಸಬೇಕಿದೆ’ ಎಂದರು.</p>.<p>‘ಬದಲಾಗುತ್ತಿರುವ ಜೀವನಶೈಲಿ, ಅತಿಯಾದ ಒತ್ತಡ, ಅನಿಯಂತ್ರಿತ ಆಹಾರ ಪದ್ಧತಿಯಿಂದ ಯುಜನರಲ್ಲಿಯೂ ಹೃದಯಾಘಾತ ಮತ್ತು ಪಾರ್ಶ್ವವಾಯು ಸಮಸ್ಯೆ ಹೆಚ್ಚುತ್ತಿದೆ. ಈ ಹಿಂದೆ ವೃದ್ಧರು ಈ ಸಮಸ್ಯೆಗಳಿಗೆ ಒಳಗಾಗುತ್ತಿದ್ದರು. ಆದರೆ, ಈಗ ಎಲ್ಲ ವಯೋಮಾನದವರಲ್ಲಿಯೂ ಈ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ’ ಎಂದು ಹೇಳಿದರು. </p>.<p>‘ದಶಕದ ಹಿಂದೆ ಯುವಕರು ತಮ್ಮ ವೃದ್ಧ ತಂದೆ-ತಾಯಿಯನ್ನು ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ವೃದ್ಧ ತಂದೆ-ತಾಯಿಗಳು ತಮ್ಮ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು ಸಾಮಾನ್ಯವಾಗಿದೆ. ಇದು ಕೇವಲ ಬದಲಾವಣೆಯಾಗಿರದೆ, ಎಚ್ಚರಿಕೆಯ ಘಂಟೆಯಾಗಿದೆ’ ಎಂದರು.</p>.<p>ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಕೆ. ಮಜುಂದಾರ್, ಮಾನವ ಸಂಪನ್ಮೂಲ ವಿಭಾಗದ ಮಹಾಪ್ರಬಂಧಕ ಕೆ.ವಿ. ರಮಣ ಮೂರ್ತಿ, ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ರವಿ ಕುಮಾರ್, ಸಂಘದ ಅಧ್ಯಕ್ಷ ಎ.ಎನ್. ಕೃಷ್ಣ ಮೂರ್ತಿ, ಪ್ರಧಾನ ಕಾರ್ಯದರ್ಶಿ ಜೆ.ಎಸ್. ಜಗದೀಶ್, ಮಾಜಿ ಪ್ರಧಾನ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪಶ್ಚಿಮ ಏಷ್ಯಾ ಸಂಘರ್ಷವು ರಾಸಾಯನಿಕ ಯುದ್ಧವಾಗಿ ಮಾರ್ಪಡುವ ಸಾಧ್ಯತೆಯಿದ್ದು, ಯುದ್ಧವು ಹೀಗೆಯೇ ಮುಂದುವರಿದಲ್ಲಿ ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಆರ್ಥಿಕ ವ್ಯವಸ್ಥೆ ಹಾಗೂ ಅಗತ್ಯ ವಸ್ತುಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ’ ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅಭಿಪ್ರಾಯಪಟ್ಟರು. </p>.<p>ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘವು ನಗರದಲ್ಲಿ ಹಮ್ಮಿಕೊಂಡಿದ್ದ 13ನೇ ತ್ರೈವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ‘ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಮುಂದುವರಿದಿದೆ. ಜಗತ್ತಿನ ಒಳಿತಿಗಾಗಿ ಈ ರಾಷ್ಟ್ರಗಳು ಪರಸ್ಪರ ಒಪ್ಪಂದದ ಮೂಲಕ ಯುದ್ಧವನ್ನು ನಿಲ್ಲಿಸಬೇಕಿದೆ’ ಎಂದರು.</p>.<p>‘ಬದಲಾಗುತ್ತಿರುವ ಜೀವನಶೈಲಿ, ಅತಿಯಾದ ಒತ್ತಡ, ಅನಿಯಂತ್ರಿತ ಆಹಾರ ಪದ್ಧತಿಯಿಂದ ಯುಜನರಲ್ಲಿಯೂ ಹೃದಯಾಘಾತ ಮತ್ತು ಪಾರ್ಶ್ವವಾಯು ಸಮಸ್ಯೆ ಹೆಚ್ಚುತ್ತಿದೆ. ಈ ಹಿಂದೆ ವೃದ್ಧರು ಈ ಸಮಸ್ಯೆಗಳಿಗೆ ಒಳಗಾಗುತ್ತಿದ್ದರು. ಆದರೆ, ಈಗ ಎಲ್ಲ ವಯೋಮಾನದವರಲ್ಲಿಯೂ ಈ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ’ ಎಂದು ಹೇಳಿದರು. </p>.<p>‘ದಶಕದ ಹಿಂದೆ ಯುವಕರು ತಮ್ಮ ವೃದ್ಧ ತಂದೆ-ತಾಯಿಯನ್ನು ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ವೃದ್ಧ ತಂದೆ-ತಾಯಿಗಳು ತಮ್ಮ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು ಸಾಮಾನ್ಯವಾಗಿದೆ. ಇದು ಕೇವಲ ಬದಲಾವಣೆಯಾಗಿರದೆ, ಎಚ್ಚರಿಕೆಯ ಘಂಟೆಯಾಗಿದೆ’ ಎಂದರು.</p>.<p>ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಕೆ. ಮಜುಂದಾರ್, ಮಾನವ ಸಂಪನ್ಮೂಲ ವಿಭಾಗದ ಮಹಾಪ್ರಬಂಧಕ ಕೆ.ವಿ. ರಮಣ ಮೂರ್ತಿ, ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ರವಿ ಕುಮಾರ್, ಸಂಘದ ಅಧ್ಯಕ್ಷ ಎ.ಎನ್. ಕೃಷ್ಣ ಮೂರ್ತಿ, ಪ್ರಧಾನ ಕಾರ್ಯದರ್ಶಿ ಜೆ.ಎಸ್. ಜಗದೀಶ್, ಮಾಜಿ ಪ್ರಧಾನ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>