‘ಇತ್ತೀಚಿನ ದಿನಗಳಲ್ಲಿ ಮದುವೆ, ಜಾತ್ರೆ, ಸಭೆ–ಸಮಾರಂಭ ಸೇರಿದಂತೆ ಸಾರ್ವಜನಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚಾಗಿವೆ. ದೇವಾಲಯಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಆದ್ದರಿಂದ ದೇವಾಲಯದ ಅರ್ಚಕರಿಗೂ ಕೋವಿಡ್ ಪರೀಕ್ಷೆ ಮಾಡುವ ಅಗತ್ಯ ವಿದೆ. ಸಾರ್ವಜನಿಕ ಸ್ಥಳದಲ್ಲಿ ಜನರು ಗುಂಪಾಗಿ ಸೇರಬಾರದು. ಸರಿಯಾದ ರೀತಿಯಲ್ಲಿ ಮುಖಗವಸನ್ನು ಧರಿಸಿ, ಪರಸ್ಪರ ಅಂತರವನ್ನು ಕಾಯ್ದುಕೊಳ್ಳಬೇಕು. ಕೋವಿಡ್ ಲಸಿಕೆಯ ಬಗೆಗಿನ ವದಂತಿಗಳಿಗೆ ಕಿವಿಗೊಡಬಾರದು. ಲಸಿಕೆ ಸುರಕ್ಷಿತವಾಗಿದೆ’ ಎಂದು ಡಾ.ಮಂಜುನಾಥ್ ತಿಳಿಸಿದರು.