<p><strong>ಬೆಂಗಳೂರು:</strong> ಸರ್ಕಾರದ ಮೂಲಕ ಖಾಸಗಿ ಆಸ್ಪತ್ರೆಗೆ ಕೋವಿಡ್ ಚಿಕಿತ್ಸೆಗಾಗಿ ದಾಖಲಾದರೆ, ಅವರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.</p>.<p>ಕೋವಿಡ್ ಚಿಕಿತ್ಸೆಯ ಹೆಸರಿನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ನಿಯಮ 69ರ ಅಡಿ ಮಾಡಿದ ಆರೋಪಕ್ಕೆ ಸಚಿವರು ಮಧ್ಯಪ್ರವೇಶಿಸಿ ಸಮಜಾಯಿಷಿ ನೀಡಿದರು.</p>.<p>ಚರ್ಚೆಯ ಸಂದರ್ಭದಲ್ಲಿ ಜೆಡಿಎಸ್ನ ಶಿವಲಿಂಗೇಗೌಡ ಅವರು, ‘ಕೋವಿಡ್ ಚಿಕಿತ್ಸೆಯಲ್ಲಿ ಖಾಸಗಿ ಆಸ್ಪತ್ರೆಗಳು ಲಕ್ಷಗಟ್ಟಲೆ ಬಿಲ್ ಮಾಡುತ್ತವೆ. ಆಂಬುಲೆನ್ಸ್ನಲ್ಲಿ ಶವ ಸಾಗಿಸಲೂ ₹40 ಸಾವಿರ ಪಡೆದ ಉದಾಹರಣೆಯೂ ಇದೆ. ನಾನೂ ಕೋವಿಡ್ನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಲಕ್ಷಗಟ್ಟಲೆ ಬಿಲ್ ಕೊಡಬೇಕಾಯಿತು’ ಎಂದು ದೂರಿದರು.</p>.<p><strong>ಕಾಂಗ್ರೆಸ್ ಸದಸ್ಯರ ಸಭಾತ್ಯಾಗ</strong><br />‘ಕೊರೊನಾ ಬಗ್ಗೆ ಜನರ ಮನೋಸ್ಥೈರ್ಯ ಹೆಚ್ಚಿಸುವ ಕೆಲಸವನ್ನು ಸರ್ಕಾರ ಮಾಡಿದೆ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ನೀಡಿದ ಉತ್ತರ ತೃಪ್ತಿಕರವಾಗಿಲ್ಲ’ ಎಂದು ಆಕ್ಷೇಪಿಸಿ ವಿಧಾನಪರಿಷತ್ನ ಕಾಂಗ್ರೆಸ್ ಸದಸ್ಯರು ಮಂಗಳವಾರ ಸಭಾತ್ಯಾಗ ಮಾಡಿದರು.</p>.<p>ಕಾಂಗ್ರೆಸ್ನ ಎಂ. ನಾರಾಯಣ ಸ್ವಾಮಿ ಮತ್ತು ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರ ನೀಡಿದ ಶ್ರೀರಾಮುಲು, ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ಸಮರ್ಥಿಸಿದರು. ‘ವ್ಯಾಕ್ಸಿನ್ ಬರುವವರೆಗೆ ನಾವು ಈ ಪರಿಸ್ಥಿತಿ ಎದುರಿಸುತ್ತಲೇ ಸಾಗಬೇಕಿದೆ. ಕೋವಿಡ್ ಜತೆಗೇ ಬದುಕಬೇಕು’ ಎಂದರು.</p>.<p>ಇದಕ್ಕೆ ಆಕ್ಷೇಪಿಸಿದ ವಿಧಾನಪರಿಷತ್ನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ‘ಸೋಂಕು ಹರಡಲು ಸರ್ಕಾರದ ವೈಫಲ್ಯ ಕಾರಣ. ಸಚಿವರ ಉತ್ತರ ತೃಪ್ತಿದಾಯಕವಾಗಿಲ್ಲ’ ಎಂದು ಸದನದಿಂದ ಹೊರನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರದ ಮೂಲಕ ಖಾಸಗಿ ಆಸ್ಪತ್ರೆಗೆ ಕೋವಿಡ್ ಚಿಕಿತ್ಸೆಗಾಗಿ ದಾಖಲಾದರೆ, ಅವರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.</p>.<p>ಕೋವಿಡ್ ಚಿಕಿತ್ಸೆಯ ಹೆಸರಿನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ನಿಯಮ 69ರ ಅಡಿ ಮಾಡಿದ ಆರೋಪಕ್ಕೆ ಸಚಿವರು ಮಧ್ಯಪ್ರವೇಶಿಸಿ ಸಮಜಾಯಿಷಿ ನೀಡಿದರು.</p>.<p>ಚರ್ಚೆಯ ಸಂದರ್ಭದಲ್ಲಿ ಜೆಡಿಎಸ್ನ ಶಿವಲಿಂಗೇಗೌಡ ಅವರು, ‘ಕೋವಿಡ್ ಚಿಕಿತ್ಸೆಯಲ್ಲಿ ಖಾಸಗಿ ಆಸ್ಪತ್ರೆಗಳು ಲಕ್ಷಗಟ್ಟಲೆ ಬಿಲ್ ಮಾಡುತ್ತವೆ. ಆಂಬುಲೆನ್ಸ್ನಲ್ಲಿ ಶವ ಸಾಗಿಸಲೂ ₹40 ಸಾವಿರ ಪಡೆದ ಉದಾಹರಣೆಯೂ ಇದೆ. ನಾನೂ ಕೋವಿಡ್ನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಲಕ್ಷಗಟ್ಟಲೆ ಬಿಲ್ ಕೊಡಬೇಕಾಯಿತು’ ಎಂದು ದೂರಿದರು.</p>.<p><strong>ಕಾಂಗ್ರೆಸ್ ಸದಸ್ಯರ ಸಭಾತ್ಯಾಗ</strong><br />‘ಕೊರೊನಾ ಬಗ್ಗೆ ಜನರ ಮನೋಸ್ಥೈರ್ಯ ಹೆಚ್ಚಿಸುವ ಕೆಲಸವನ್ನು ಸರ್ಕಾರ ಮಾಡಿದೆ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ನೀಡಿದ ಉತ್ತರ ತೃಪ್ತಿಕರವಾಗಿಲ್ಲ’ ಎಂದು ಆಕ್ಷೇಪಿಸಿ ವಿಧಾನಪರಿಷತ್ನ ಕಾಂಗ್ರೆಸ್ ಸದಸ್ಯರು ಮಂಗಳವಾರ ಸಭಾತ್ಯಾಗ ಮಾಡಿದರು.</p>.<p>ಕಾಂಗ್ರೆಸ್ನ ಎಂ. ನಾರಾಯಣ ಸ್ವಾಮಿ ಮತ್ತು ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರ ನೀಡಿದ ಶ್ರೀರಾಮುಲು, ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ಸಮರ್ಥಿಸಿದರು. ‘ವ್ಯಾಕ್ಸಿನ್ ಬರುವವರೆಗೆ ನಾವು ಈ ಪರಿಸ್ಥಿತಿ ಎದುರಿಸುತ್ತಲೇ ಸಾಗಬೇಕಿದೆ. ಕೋವಿಡ್ ಜತೆಗೇ ಬದುಕಬೇಕು’ ಎಂದರು.</p>.<p>ಇದಕ್ಕೆ ಆಕ್ಷೇಪಿಸಿದ ವಿಧಾನಪರಿಷತ್ನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ‘ಸೋಂಕು ಹರಡಲು ಸರ್ಕಾರದ ವೈಫಲ್ಯ ಕಾರಣ. ಸಚಿವರ ಉತ್ತರ ತೃಪ್ತಿದಾಯಕವಾಗಿಲ್ಲ’ ಎಂದು ಸದನದಿಂದ ಹೊರನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>