ಬೆಂಗಳೂರು: ಕುವೆಂಪು ಕಲಾನಿಕೇತನ ನೀಡುವ ‘ನಟ ಸಾರ್ವಭೌಮ ಡಾ. ರಾಜ್ಕುಮಾರ್ ಪ್ರಶಸ್ತಿ’ಗೆ ಚಲನಚಿತ್ರ ಹಾಸ್ಯ ನಟ ಹೊನ್ನವಳ್ಳಿ ಕೃಷ್ಣ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ₹10 ಸಾವಿರ ನಗದು, ಬೆಳ್ಳಿ ಪದಕ ಒಳ್ಳಗೊಂಡಿದೆ. ‘ನಗರದ ಜೆ.ಸಿ. ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಜೂನ್ 18ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಕುವೆಂಪು ಕಲಾನಿಕೇತನದ ಅಧ್ಯಕ್ಷ ಕುವೆಂಪು ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.