<p><strong>ಬೆಂಗಳೂರು:</strong> ನಗರದ ವಿವಿಧೆಡೆ ವರನಟ ದಿವಂಗತ ಡಾ.ರಾಜ್ಕುಮಾರ್ ಅವರ 97ನೇ ಜನ್ಮದಿನವನ್ನು ಅಭಿಮಾನಿಗಳು ಗುರುವಾರ ಸಡಗರದಿಂದ ಆಚರಿಸಿದರು.</p>.<p>ರಾಜ್ಕುಮಾರ್ ಪ್ರತಿಮೆಗೆ ಹೂವಿನ ಹಾರ ಹಾಕಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು. ಜನ್ಮದಿನದ ಅಂಗವಾಗಿ ನಗರದ ವಿವಿಧೆಡೆ ರಕ್ತದಾನ ಮತ್ತು ನೇತ್ರದಾನ ಜಾಗೃತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಯಿತು. </p>.<p>ಮಲ್ಲೇಶ್ವರದ ಸೇವಾ ಸದನದಲ್ಲಿ ರಾಜ್ಕುಮಾರ್ ಅವರ ಜನ್ಮದಿನದ ನೆನಪಿನಲ್ಲಿ ರಾಜ್ಕುಮಾರ್ ಅವರು ನಟಿಸಿರುವ ಹಳೆ ಚಲನಚಿತ್ರ ಗೀತೆಗಳು, ಶಾಸ್ತ್ರೀಯ ನೃತ್ಯ ಕಾರ್ಯಕ್ರಮ ನಡೆಯಿತು. </p>.<p><strong>ಚಲನಚಿತ್ರ ಕ್ಷೇತ್ರಕ್ಕೆ ರಾಜ್ ಕೊಡುಗೆ ಅಪಾರ: </strong>ಕರ್ನಾಟಕ ರತ್ನ, ಕನ್ನಡದ ಸಾರ್ವಭೌಮ ಎಂಬ ಬಿರುದುಗಳಿಗೆ ಭಾಜನರಾಗಿದ್ದ ರಾಜ್ಕುಮಾರ್ ಅವರು ಕನ್ನಡ ಚಲನಚಿತ್ರ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಹೇಳಿದರು.</p>.<p>ಬೆಂಗಳೂರು ನಗರ ಜಿಲ್ಲಾಡಳಿತದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಕುಮಾರ್ ಅವರ 97ನೇ ಜನ್ಮದಿನಾಚರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡ ಕಲೆ, ಸಾಹಿತ್ಯಕ್ಕೆ ಕೀರ್ತಿಯನ್ನು ತಂದುಕೊಟ್ಟ ಶ್ರೇಯಸ್ಸು ರಾಜ್ಕುಮಾರ್ ಅವರಿಗೆ ಸಲ್ಲುತ್ತದೆ. ಅವರು ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪೌರಾಣಿಕ ಹಾಗೂ ಐತಿಹಾಸಿಕ ಪಾತ್ರಗಳಿಗೆ ಜೀವತುಂಬಿದ್ದಾರೆ. ಗೋಕಾಕ್ ಚಳವಳಿಯಲ್ಲಿ ಭಾಗಿಯಾಗುವ ಮೂಲಕ ಕನ್ನಡಿಗರ ಭಾಷಾಭಿಮಾನವನ್ನು ಬಡಿದೆಬ್ಬಿಸಿದ್ದರು ಎಂದು ಮೆಲುಕುಹಾಕಿದರು. </p>.<p>ಇದೇ ಸಂದರ್ಭದಲ್ಲಿ ರಾಜಕುಮಾರ್ ಅವರು ತಮ್ಮ ಜೀವನದಲ್ಲಿ ಮೈಗೂಡಿಸಿಕೊಂಡಿದ್ದ ಯೋಗಾಭ್ಯಾಸದ ಅನುಕೂಲಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ರಾಜಾಜಿನಗರದ ಎಸ್.ಜೆ.ಆರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಭಂಗಿಗಳ ಯೋಗಾಸನಗಳನ್ನು ಪ್ರದರ್ಶಿಸಿದರು.</p>.<p>ಜೋಗಿಲ ಸಿದ್ಧರಾಜು ಅವರ ‘ಸಂಭ್ರಮ’ ಕಲಾತಂಡದವರು ರಾಜ್ಕುಮಾರ್ ಅವರ ಜನಪ್ರಿಯ ಚಲನಚಿತ್ರ ಗೀತೆಗಳನ್ನು ಪ್ರಸ್ತುತಪಡಿಸಿದರು. </p>.<p><strong>ಯಲಹಂಕ ವರದಿ</strong>: ಇಲ್ಲಿನ ನಗರ್ತಪೇಟೆ ರಸ್ತೆಯಲ್ಲಿರುವ ರಣಧೀರ ಕಂಠೀರವ ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ವರನಟ ರಾಜ್ಕುಮಾರ್ ಅವರ 97ನೇ ಜನ್ಮದಿನವನ್ನು ಆಚರಿಸಲಾಯಿತು.</p>.<p>ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಪೂಜೆ ಸಲ್ಲಿಸಿದ ಅಭಿಮಾನಿಗಳು, ಕೇಕ್ ಕತ್ತರಿಸಿ, ಸಿಹಿಹಂಚಿ, ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದರು. ಅನ್ನದಾನ ಏರ್ಪಡಿಸಲಾಗಿತ್ತು.</p>.<p>ಸಂಘದ ಅಧ್ಯಕ್ಷ ನಾರಾಯಣ, ಪದಾಧಿಕಾರಿಗಳಾದ ನಾಗರಾಜ್, ಭಾಸ್ಕರ್, ಶೇಖರ್, ಶಕ್ತಿಗ್ರೂಪ್ನ ಮಂಜುನಾಥ್, ನರೇಂದ್ರಕುಮಾರ್, ಪ್ರವೀಣ್, ಅಪ್ಪಿ, ಸುಮಂತ್, ಬಾಲಾಜಿ, ನಾಗಾರ್ಜುನ, ದಶರಥ, ವೀರಭದ್ರ.ವೈ.ಸಿ, ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ವಿವಿಧೆಡೆ ವರನಟ ದಿವಂಗತ ಡಾ.ರಾಜ್ಕುಮಾರ್ ಅವರ 97ನೇ ಜನ್ಮದಿನವನ್ನು ಅಭಿಮಾನಿಗಳು ಗುರುವಾರ ಸಡಗರದಿಂದ ಆಚರಿಸಿದರು.</p>.<p>ರಾಜ್ಕುಮಾರ್ ಪ್ರತಿಮೆಗೆ ಹೂವಿನ ಹಾರ ಹಾಕಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು. ಜನ್ಮದಿನದ ಅಂಗವಾಗಿ ನಗರದ ವಿವಿಧೆಡೆ ರಕ್ತದಾನ ಮತ್ತು ನೇತ್ರದಾನ ಜಾಗೃತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಯಿತು. </p>.<p>ಮಲ್ಲೇಶ್ವರದ ಸೇವಾ ಸದನದಲ್ಲಿ ರಾಜ್ಕುಮಾರ್ ಅವರ ಜನ್ಮದಿನದ ನೆನಪಿನಲ್ಲಿ ರಾಜ್ಕುಮಾರ್ ಅವರು ನಟಿಸಿರುವ ಹಳೆ ಚಲನಚಿತ್ರ ಗೀತೆಗಳು, ಶಾಸ್ತ್ರೀಯ ನೃತ್ಯ ಕಾರ್ಯಕ್ರಮ ನಡೆಯಿತು. </p>.<p><strong>ಚಲನಚಿತ್ರ ಕ್ಷೇತ್ರಕ್ಕೆ ರಾಜ್ ಕೊಡುಗೆ ಅಪಾರ: </strong>ಕರ್ನಾಟಕ ರತ್ನ, ಕನ್ನಡದ ಸಾರ್ವಭೌಮ ಎಂಬ ಬಿರುದುಗಳಿಗೆ ಭಾಜನರಾಗಿದ್ದ ರಾಜ್ಕುಮಾರ್ ಅವರು ಕನ್ನಡ ಚಲನಚಿತ್ರ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಹೇಳಿದರು.</p>.<p>ಬೆಂಗಳೂರು ನಗರ ಜಿಲ್ಲಾಡಳಿತದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಕುಮಾರ್ ಅವರ 97ನೇ ಜನ್ಮದಿನಾಚರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡ ಕಲೆ, ಸಾಹಿತ್ಯಕ್ಕೆ ಕೀರ್ತಿಯನ್ನು ತಂದುಕೊಟ್ಟ ಶ್ರೇಯಸ್ಸು ರಾಜ್ಕುಮಾರ್ ಅವರಿಗೆ ಸಲ್ಲುತ್ತದೆ. ಅವರು ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪೌರಾಣಿಕ ಹಾಗೂ ಐತಿಹಾಸಿಕ ಪಾತ್ರಗಳಿಗೆ ಜೀವತುಂಬಿದ್ದಾರೆ. ಗೋಕಾಕ್ ಚಳವಳಿಯಲ್ಲಿ ಭಾಗಿಯಾಗುವ ಮೂಲಕ ಕನ್ನಡಿಗರ ಭಾಷಾಭಿಮಾನವನ್ನು ಬಡಿದೆಬ್ಬಿಸಿದ್ದರು ಎಂದು ಮೆಲುಕುಹಾಕಿದರು. </p>.<p>ಇದೇ ಸಂದರ್ಭದಲ್ಲಿ ರಾಜಕುಮಾರ್ ಅವರು ತಮ್ಮ ಜೀವನದಲ್ಲಿ ಮೈಗೂಡಿಸಿಕೊಂಡಿದ್ದ ಯೋಗಾಭ್ಯಾಸದ ಅನುಕೂಲಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ರಾಜಾಜಿನಗರದ ಎಸ್.ಜೆ.ಆರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಭಂಗಿಗಳ ಯೋಗಾಸನಗಳನ್ನು ಪ್ರದರ್ಶಿಸಿದರು.</p>.<p>ಜೋಗಿಲ ಸಿದ್ಧರಾಜು ಅವರ ‘ಸಂಭ್ರಮ’ ಕಲಾತಂಡದವರು ರಾಜ್ಕುಮಾರ್ ಅವರ ಜನಪ್ರಿಯ ಚಲನಚಿತ್ರ ಗೀತೆಗಳನ್ನು ಪ್ರಸ್ತುತಪಡಿಸಿದರು. </p>.<p><strong>ಯಲಹಂಕ ವರದಿ</strong>: ಇಲ್ಲಿನ ನಗರ್ತಪೇಟೆ ರಸ್ತೆಯಲ್ಲಿರುವ ರಣಧೀರ ಕಂಠೀರವ ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ವರನಟ ರಾಜ್ಕುಮಾರ್ ಅವರ 97ನೇ ಜನ್ಮದಿನವನ್ನು ಆಚರಿಸಲಾಯಿತು.</p>.<p>ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಪೂಜೆ ಸಲ್ಲಿಸಿದ ಅಭಿಮಾನಿಗಳು, ಕೇಕ್ ಕತ್ತರಿಸಿ, ಸಿಹಿಹಂಚಿ, ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದರು. ಅನ್ನದಾನ ಏರ್ಪಡಿಸಲಾಗಿತ್ತು.</p>.<p>ಸಂಘದ ಅಧ್ಯಕ್ಷ ನಾರಾಯಣ, ಪದಾಧಿಕಾರಿಗಳಾದ ನಾಗರಾಜ್, ಭಾಸ್ಕರ್, ಶೇಖರ್, ಶಕ್ತಿಗ್ರೂಪ್ನ ಮಂಜುನಾಥ್, ನರೇಂದ್ರಕುಮಾರ್, ಪ್ರವೀಣ್, ಅಪ್ಪಿ, ಸುಮಂತ್, ಬಾಲಾಜಿ, ನಾಗಾರ್ಜುನ, ದಶರಥ, ವೀರಭದ್ರ.ವೈ.ಸಿ, ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>