<p><strong>ಬೆಂಗಳೂರು:</strong> ಚಿತ್ರನಟ ದಿವಂಗತ ಡಾ. ರಾಜ್ಕುಮಾರ್ ಅವರ 91ನೇ ಜನ್ಮದಿನಾಚರಣೆ ಬುಧವಾರ (ಏ 24)ರಂದು ನಡೆಯಲಿದೆ.</p>.<p>ಎಂಥದೇ ಪಾತ್ರವಾದರೂ ಅದಕ್ಕೆ ಜೀವ ತುಂಬುವಂತಹ ಅದ್ಭುತ ಅಭಿನಯ, ತಮ್ಮ ಸರಳತೆ–ಸಜ್ಜನಿಕೆಯಿಂದ ಕನ್ನಡಿಗರ ಮನಗೆದ್ದ ಡಾ. ರಾಜ್, ಗೋಕಾಕ್ ಚಳವಳಿಯಲ್ಲಿ ಭಾಗಿಯಾಗುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಬಡಿದೆಬ್ಬಿಸಿದವರು.</p>.<p>2006 ಏಪ್ರಿಲ್ 12ರಂದು ಅವರು ನಿಧನರಾಗಿದ್ದು, ಆ ಬಳಿಕ ಅವರ ಜನ್ಮ ದಿನಾಚರಣೆಯನ್ನು ಅಭಿಮಾನಿಗಳು ಸವಿನೆನಪಿನಿಂದ ಆಚರಿಸುತ್ತಾ ಬರುತ್ತಿದ್ದಾರೆ. ಬೆಂಗಳೂರು ಸೇರಿದಂತೆ ನಾಡಿನ ವಿವಿಧೆಡೆ ಇರುವ ರಾಜ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಅಭಿಮಾನಿಗಳು ಅವರಿಗೆ ಗೌರವ ಸಲ್ಲಿಸಲಿದ್ದಾರೆ.</p>.<p>ಕರ್ನಾಟಕ ಚಲನಚಿತ್ರ ಅಕಾಡೆಮಿಯು ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 5ಗಂಟೆಗೆ ರಾಜ್ ಜನ್ಮ ದಿನಾಚರಣೆ ಹಮ್ಮಿಕೊಂಡಿದೆ. ಕವಿ ಕೆ.ಎಸ್. ನಿಸಾರ್ ಅಹಮದ್, ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್, ರಾಜ್ ಪುತ್ರರಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಭಾಗವಹಿಸಲಿದ್ದಾರೆ.</p>.<p>ಚಿತ್ರ ನಿರ್ದೇಶಕ ಯೋಗರಾಜ್ ಭಟ್ ಸಂಯೋಜನೆಯಲ್ಲಿ ರಾಜ್ಕುಮಾರ್ ಅವರು ಹಾಡಿದ್ದ ಚಿತ್ರಗೀತೆಗಳ ಗಾಯನ ಕೂಡ ನಡೆಯಲಿದೆ.</p>.<p>ನಗರದ ವಿವಿಧ ಸಂಸ್ಥೆಗಳು ಡಾ. ರಾಜ್ ಧ್ವನಿ ಗಾಯನ ಸ್ಪರ್ಧೆ, ಡಾ. ರಾಜ್ ಗೀತಗಾಯನ ಕಾರ್ಯಕ್ರಮಗಳನ್ನು ಏರ್ಪಡಿಸಿವೆ. ಮಲ್ಲೇಶ್ವರದ ಗೋಕಾಕ್ ಚಳವಳಿ ವೃತ್ತದಲ್ಲೂ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿತ್ರನಟ ದಿವಂಗತ ಡಾ. ರಾಜ್ಕುಮಾರ್ ಅವರ 91ನೇ ಜನ್ಮದಿನಾಚರಣೆ ಬುಧವಾರ (ಏ 24)ರಂದು ನಡೆಯಲಿದೆ.</p>.<p>ಎಂಥದೇ ಪಾತ್ರವಾದರೂ ಅದಕ್ಕೆ ಜೀವ ತುಂಬುವಂತಹ ಅದ್ಭುತ ಅಭಿನಯ, ತಮ್ಮ ಸರಳತೆ–ಸಜ್ಜನಿಕೆಯಿಂದ ಕನ್ನಡಿಗರ ಮನಗೆದ್ದ ಡಾ. ರಾಜ್, ಗೋಕಾಕ್ ಚಳವಳಿಯಲ್ಲಿ ಭಾಗಿಯಾಗುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಬಡಿದೆಬ್ಬಿಸಿದವರು.</p>.<p>2006 ಏಪ್ರಿಲ್ 12ರಂದು ಅವರು ನಿಧನರಾಗಿದ್ದು, ಆ ಬಳಿಕ ಅವರ ಜನ್ಮ ದಿನಾಚರಣೆಯನ್ನು ಅಭಿಮಾನಿಗಳು ಸವಿನೆನಪಿನಿಂದ ಆಚರಿಸುತ್ತಾ ಬರುತ್ತಿದ್ದಾರೆ. ಬೆಂಗಳೂರು ಸೇರಿದಂತೆ ನಾಡಿನ ವಿವಿಧೆಡೆ ಇರುವ ರಾಜ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಅಭಿಮಾನಿಗಳು ಅವರಿಗೆ ಗೌರವ ಸಲ್ಲಿಸಲಿದ್ದಾರೆ.</p>.<p>ಕರ್ನಾಟಕ ಚಲನಚಿತ್ರ ಅಕಾಡೆಮಿಯು ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 5ಗಂಟೆಗೆ ರಾಜ್ ಜನ್ಮ ದಿನಾಚರಣೆ ಹಮ್ಮಿಕೊಂಡಿದೆ. ಕವಿ ಕೆ.ಎಸ್. ನಿಸಾರ್ ಅಹಮದ್, ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್, ರಾಜ್ ಪುತ್ರರಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಭಾಗವಹಿಸಲಿದ್ದಾರೆ.</p>.<p>ಚಿತ್ರ ನಿರ್ದೇಶಕ ಯೋಗರಾಜ್ ಭಟ್ ಸಂಯೋಜನೆಯಲ್ಲಿ ರಾಜ್ಕುಮಾರ್ ಅವರು ಹಾಡಿದ್ದ ಚಿತ್ರಗೀತೆಗಳ ಗಾಯನ ಕೂಡ ನಡೆಯಲಿದೆ.</p>.<p>ನಗರದ ವಿವಿಧ ಸಂಸ್ಥೆಗಳು ಡಾ. ರಾಜ್ ಧ್ವನಿ ಗಾಯನ ಸ್ಪರ್ಧೆ, ಡಾ. ರಾಜ್ ಗೀತಗಾಯನ ಕಾರ್ಯಕ್ರಮಗಳನ್ನು ಏರ್ಪಡಿಸಿವೆ. ಮಲ್ಲೇಶ್ವರದ ಗೋಕಾಕ್ ಚಳವಳಿ ವೃತ್ತದಲ್ಲೂ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>