ಉದ್ಯಮ ಕ್ಷೇತ್ರದ ಅಗತ್ಯಕ್ಕೆ ತಕ್ಕಂತೆ ಕೌಶಲ ಅಭಿವೃದ್ಧಿಗೆ ₹5 ಸಾವಿರ ಕೋಟಿ ವೆಚ್ಚದಲ್ಲಿ ರಾಜ್ಯದ 150 ಐಟಿಐ ಕಾಲೇಜುಗಳಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ ಆರಂಭಿಸಲಾಗಿದೆ ಎಂದರು. ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಸಿ.ಜಿ.ಶ್ರೀನಿವಾಸನ್ ಮಾತನಾಡಿ, ‘ಯುವ ಉದ್ದಿಮೆದಾರರ ಮುಂದೆ ಅವ ಕಾಶಗಳ ರಾಶಿಯಿದೆ. ಆದರೆ, ಅವುಗಳ ಸದ್ಬಳಕೆ ಮಾಡಿ ಕೊಳ್ಳಲು ಬೇಕಾದ ತಿಳಿವಳಿಕೆ ಕೊರತೆ ಇದೆ’ ಎಂದು ವಿಷಾದಿಸಿದರು.