<p><strong>ಕೆ.ಆರ್.ಪುರ:</strong> ಯುವ ಸಮೂಹ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಉನ್ನತ ಸಾಧನೆಯ ಕಡೆಗೆ ಸಾಗಬೇಕು ಎಂದು ಕಿದ್ವಾಯಿ ಸಂಸ್ಥೆಯ ಮಾಜಿ ನಿರ್ದೇಶಕಿ ಡಾ.ವಿಜಯಲಕ್ಷ್ಮೀ ದೇಶಮಾನೆ ಹೇಳಿದರು.</p>.<p>ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2025-26ನೇ ಸಾಲಿನ ಪದವಿ ಪ್ರಥಮ ವರ್ಷದ (ಬಿ.ಇ, ಬಿ.ಟೆಕ್) ಎಂಜಿನಿಯರಿಂಗ್ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮೂಲಕ ಭಾರತ ದಾಪುಗಾಲು ಹಾಕಿದೆ. ಇದಕ್ಕೆ ಯುವ ಸಮೂಹದ ಪಾತ್ರವೂ ಮಹತ್ವದ್ದಾಗಿದೆ. ಹೊಸ ತಂತ್ರಜ್ಞಾನದಿಂದ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಅನುಕೂಲವಾಗಲಿದೆ. ಇದಕ್ಕೆ ಶೈಕ್ಷಣಿಕ ಸಂಸ್ಥೆಗಳು ನೀಡುವ ಸಹಕಾರವೂ ಅವಶ್ಯವಿದೆ ಎಂದರು.</p>.<p>ಇತಿಹಾಸ್ ರಿಸರ್ಚ್ ಆ್ಯಂಡ್ ಡಿಜಿಟಲ್ ಸಂಸ್ಥೆಯ ಸಹ ಸಂಸ್ಥಾಪಕ ಡಾ.ಎನ್.ದಯಾಸಿಂಧು ಮಾತನಾಡಿ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ವ್ಯಾಪಕವಾಗಿ ಪ್ರಚಲಿತದಲ್ಲಿದ್ದು, ಈ ಕುರಿತ ಕೋರ್ಸ್ ಗಳನ್ನು ಆಸಕ್ತಿದಾಯಕವಾಗಿ ತಿಳಿದುಕೊಂಡು ಮುನ್ನಡೆ ಸಾಧಿಸಬೇಕಿದೆ ಎಂದರು.</p>.<p>ಕೇಂಬ್ರಿಡ್ಜ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಕೆ.ಮೋಹನ್, ಸಿಇಒ ನಿತಿನ್ ಮೋಹನ್, ಸಲಹೆಗಾರ ಡಾ.ಕೆ.ಎನ್.ಬಾಲಸುಬ್ರಹ್ಮಣ್ಯಮೂರ್ತಿ, ಪ್ರಾಂಶುಪಾಲ ಡಾ.ಬಿ.ವಿ.ರವಿಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಯುವ ಸಮೂಹ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಉನ್ನತ ಸಾಧನೆಯ ಕಡೆಗೆ ಸಾಗಬೇಕು ಎಂದು ಕಿದ್ವಾಯಿ ಸಂಸ್ಥೆಯ ಮಾಜಿ ನಿರ್ದೇಶಕಿ ಡಾ.ವಿಜಯಲಕ್ಷ್ಮೀ ದೇಶಮಾನೆ ಹೇಳಿದರು.</p>.<p>ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2025-26ನೇ ಸಾಲಿನ ಪದವಿ ಪ್ರಥಮ ವರ್ಷದ (ಬಿ.ಇ, ಬಿ.ಟೆಕ್) ಎಂಜಿನಿಯರಿಂಗ್ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮೂಲಕ ಭಾರತ ದಾಪುಗಾಲು ಹಾಕಿದೆ. ಇದಕ್ಕೆ ಯುವ ಸಮೂಹದ ಪಾತ್ರವೂ ಮಹತ್ವದ್ದಾಗಿದೆ. ಹೊಸ ತಂತ್ರಜ್ಞಾನದಿಂದ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಅನುಕೂಲವಾಗಲಿದೆ. ಇದಕ್ಕೆ ಶೈಕ್ಷಣಿಕ ಸಂಸ್ಥೆಗಳು ನೀಡುವ ಸಹಕಾರವೂ ಅವಶ್ಯವಿದೆ ಎಂದರು.</p>.<p>ಇತಿಹಾಸ್ ರಿಸರ್ಚ್ ಆ್ಯಂಡ್ ಡಿಜಿಟಲ್ ಸಂಸ್ಥೆಯ ಸಹ ಸಂಸ್ಥಾಪಕ ಡಾ.ಎನ್.ದಯಾಸಿಂಧು ಮಾತನಾಡಿ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ವ್ಯಾಪಕವಾಗಿ ಪ್ರಚಲಿತದಲ್ಲಿದ್ದು, ಈ ಕುರಿತ ಕೋರ್ಸ್ ಗಳನ್ನು ಆಸಕ್ತಿದಾಯಕವಾಗಿ ತಿಳಿದುಕೊಂಡು ಮುನ್ನಡೆ ಸಾಧಿಸಬೇಕಿದೆ ಎಂದರು.</p>.<p>ಕೇಂಬ್ರಿಡ್ಜ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಕೆ.ಮೋಹನ್, ಸಿಇಒ ನಿತಿನ್ ಮೋಹನ್, ಸಲಹೆಗಾರ ಡಾ.ಕೆ.ಎನ್.ಬಾಲಸುಬ್ರಹ್ಮಣ್ಯಮೂರ್ತಿ, ಪ್ರಾಂಶುಪಾಲ ಡಾ.ಬಿ.ವಿ.ರವಿಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>