ನಗರದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಫ್ಕೆಸಿಸಿಐ) ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಉದ್ಯಮಿಗಳಿಗೆ ರಫ್ತು ಉತ್ತೇಜನಾ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ‘ಈಗ ರಾಜ್ಯವು ಸಾಫ್ಟ್ವೇರ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಅದರ ಜತೆಯಲ್ಲೇ ಆರೋಗ್ಯ ಮತ್ತು ಸ್ವಾಸ್ಥ್ಯ ಸೇವೆಗಳು, ಶೈಕ್ಷಣಿಕ ಸೇವೆಗಳು, ಮೂಲಸೌಕರ್ಯ ಮತ್ತು ನಿರ್ಮಾಣ ಕ್ಷೇತ್ರ, ಪಾವತಿ ಹಾಗೂ ವಲಸೆ ನೆರವು ಸೇವೆಗಳು, ಸರಕು ಸಾಗಣೆ ಮತ್ತು ಸಾರಿಗೆ ಸೇವೆಗಳು ಹಾಗೂ ಮನರಂಜನಾ ಸೇವಾ ವಲಯಗಳನ್ನು ಉತ್ತೇಜಿಸಲು ನಿರ್ಧರಿಸಲಾಗಿದೆ’ ಎಂದರು.