<p><strong>ಬೆಂಗಳೂರು: </strong>‘ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 544 ಮಂದಿ ಒಳಚರಂಡಿ ಸಹಾಯಕರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಮಾರ್ಚ್ 28ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದುಪಾಲಿಕೆ ಒಳಚರಂಡಿ ಸಹಾಯಕರು ಮತ್ತು ಪೌರ ಕಾರ್ಮಿಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಾರಾಯಣ್ ತಿಳಿಸಿದರು.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಒಳಚರಂಡಿ ಸಹಾಯಕರುಒಳಚರಂಡಿ ಸ್ವಚ್ಛತಾ ಕೆಲಸ ಮಾಡುವಾಗಲೇ ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡಿದ್ದು, ಚರ್ಮರೋಗ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವರ್ಷಕ್ಕೆ ಸುಮಾರು ಆರು ಮಂದಿ ಮೃತಪಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಗುತ್ತಿಗೆ ಪೌರಕಾರ್ಮಿಕರಿಗೆ ಸಿಗುತ್ತಿರುವ ಯಾವ ಸೌಲಭ್ಯಗಳೂಒಳಚರಂಡಿ ಸಹಾಯಕರಿಗೆ ಸಿಗುತ್ತಿಲ್ಲ. ಇವರನ್ನು ಕಾಯಂಗೊಳಿಸಿ, ಎಲ್ಲ ಸೌಕರ್ಯಗಳನ್ನು ಕಲ್ಪಿಸಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 544 ಮಂದಿ ಒಳಚರಂಡಿ ಸಹಾಯಕರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಮಾರ್ಚ್ 28ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದುಪಾಲಿಕೆ ಒಳಚರಂಡಿ ಸಹಾಯಕರು ಮತ್ತು ಪೌರ ಕಾರ್ಮಿಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಾರಾಯಣ್ ತಿಳಿಸಿದರು.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಒಳಚರಂಡಿ ಸಹಾಯಕರುಒಳಚರಂಡಿ ಸ್ವಚ್ಛತಾ ಕೆಲಸ ಮಾಡುವಾಗಲೇ ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡಿದ್ದು, ಚರ್ಮರೋಗ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವರ್ಷಕ್ಕೆ ಸುಮಾರು ಆರು ಮಂದಿ ಮೃತಪಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಗುತ್ತಿಗೆ ಪೌರಕಾರ್ಮಿಕರಿಗೆ ಸಿಗುತ್ತಿರುವ ಯಾವ ಸೌಲಭ್ಯಗಳೂಒಳಚರಂಡಿ ಸಹಾಯಕರಿಗೆ ಸಿಗುತ್ತಿಲ್ಲ. ಇವರನ್ನು ಕಾಯಂಗೊಳಿಸಿ, ಎಲ್ಲ ಸೌಕರ್ಯಗಳನ್ನು ಕಲ್ಪಿಸಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>