‘ದೂರುದಾರ ಗಣೇಶ್, ಜೆರಾಕ್ಸ್ ಅಂಗಡಿ ಇಟ್ಟುಕೊಂಡಿದ್ದಾರೆ. ಸರ್ಕಾರಿ ನೌಕರಿಗಾಗಿ ಅರ್ಜಿ ಸಲ್ಲಿಸಿದ್ದರು. ಅಂಗಡಿಗೆ ಬಂದಿದ್ದ ಮುರಳಿಗೌಡ, ತಾನು ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿರುವುದಾಗಿ ಹೇಳಿ ಪರಿಚಯಿಸಿಕೊಂಡಿದ್ದ. ‘ಡಿಆರ್ಡಿಒ ಸಂಸ್ಥೆಯಲ್ಲಿ ಸಹಾಯಕ ಆಡಳಿತಗಾರ ಹುದ್ದೆ ಖಾಲಿ ಇದೆ. ₹ 6 ಲಕ್ಷ ಖರ್ಚು ಮಾಡಿದರೆ ಹುದ್ದೆ ಕೊಡಿಸುತ್ತೇನೆ’ ಎಂದು ಆರೋಪಿ ಹೇಳಿದ್ದ. ಅದನ್ನು ನಂಬಿದ್ದ ದೂರುದಾರ, ₹ 3 ಲಕ್ಷ ಮುಂಗಡವಾಗಿ ನೀಡಿದ್ದರು. ಈ ಸಂಗತಿ ದೂರಿನಲ್ಲಿದೆ.’