‘ಏಪ್ರಿಲ್ 10ರಂದು ಮನೋಜ್ ಅವರಿಗೆ ಪುನಃ ಕರೆ ಮಾಡಿದ್ದ ಆರೋಪಿಗಳು, ತುಮಕೂರಿನ ಕಾಲೇಜಿಗೆ ಬಂದು ಪ್ರವೇಶ ಪಡೆಯುವಂತೆ ಹೇಳಿದ್ದರು. ಅದನ್ನೂ ನಂಬಿದ್ದ ಮನೋಜ್, ಮಗಳ ಜೊತೆ ಕಾಲೇಜಿಗೆ ಹೋದಾಗ ಆರೋಪಿಗಳು ಸಿಕ್ಕಿರಲಿಲ್ಲ. ಮೊಬೈಲ್ ಸಹ ಸ್ವಿಚ್ಡ್ ಆಫ್ ಆಗಿತ್ತು. ಅನುಮಾನಗೊಂಡ ಅವರು ಕಂಪನಿ ಕಚೇರಿಗೆ ಬಂದಿದ್ದರು. ಅಷ್ಟರಲ್ಲೇ ಆರೋಪಿಗಳು, ಕಚೇರಿಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದರು’ ಎಂದೂ ಪೊಲೀಸ್ ಮೂಲಗಳು ಹೇಳಿವೆ.