ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಹೆಚ್ಚಾಗಿದ್ದರಿಂದ 2020ರ ಮಾರ್ಚ್ನಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಪಾನಮತ್ತ ಚಾಲನೆಯಿಂದ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಹೀಗಾಗಿ, ವೈದ್ಯರ ಸಲಹೆ ಪಡೆದು ಶನಿವಾರ ರಾತ್ರಿಯಿಂದಲೇ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುತ್ತಿದೆ’ ಎಂದರು.